September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ನಿಯಮಾವಳಿಯಂತೆ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಪಂಚಾಯತುಗಳ ಅಭಿವೃದ್ಧಿಗಳಿಗೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಮಾಡಿದ್ದಾರೆ.

ಪೂಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅಗಲೀಕರಣ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು, ಸದರಿ ಕಾಮಗಾರಿ ಮಾಡಲು ವಾಸ್ತವ್ಯ ಮತ್ತು ವಾಣಿಜ್ಯ ಸೇರಿದಂತೆ ಹಲವು ಕಟ್ಟಡಗಳನ್ನು ತೆರವು ಮಾಡಲು ಪರಿಹಾರ ಧನ ಪಡೆದುಕೊಂಡ ಬಹುತೇಕ ವಾಣಿಜ್ಯ ಕಟ್ಟಡ, ಮನೆಗಳ ಮಾಲೀಕರು ಕಾನೂನು ಬಾಹಿರವಾಗಿ ಸ್ಥಳೀಯ ಗ್ರಾಮ ಪಂಚಾಯತಿನಿಂದ ಮನೆ, ಕಟ್ಟಡ ರಚನೆ, ದುರಸ್ಥಿ, ಸೇರ್ಪಡೆ, ನವೀಕರಣ, ವಿಸ್ತರಣೆ ಮಾಡುವ ಬಗ್ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾನೂನು ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದಿಂದ ಪರಿಹಾರದ ಹಣ ಪಡೆದುಕೊಂಡ ಮಾಲೀಕರಿಗೆ ಅನುಮೋದನೆ ನೀಡಬಾರದು ಹಾಗೂ ಮನೆ, ವಾಣಿಜ್ಯ ಕಟ್ಟಡಗಳ ಕದ ನಂಬರ್, ಕಟ್ಟಡ ತೆರಿಗೆ, ಆಸ್ತಿ ಸಂಖ್ಯೆಯನ್ನು ರದ್ದುಪಡಿಸಿ ಅಕ್ರಮ ಕಟ್ಟಡಗಳ ಕಾಮಗಾರಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕಾಗಿ ಪ್ರತೀಕ್ ಅಂಕಾಜೆ ಇವರು ಮನವಿ ಮಾಡಿದ್ದು, ಇದರ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಜಿರೆ, ಕುವೆಟ್ಟು, ಮಡಂತ್ಯಾರು, ಧರ್ಮಸ್ಥಳ, ಚಾರ್ಮಾಡಿ, ನಿಡ್ಲೆ, ಕೊಕ್ಕಡ, ಬಳಂಜ, ಅಳದಂಗಡಿ, ಸುಲ್ಕೇರಿ ಮತ್ತು ನಾರಾವಿಎ ಪಂಚಾಯತುಗಳಿಗೆ ಕಳುಹಿಸಿದ ಆದೇಶದಲ್ಲಿ ಸೂಚಿಸಲಾಗಿದೆ.

Related posts

ಬೇಸಿಗೆ ರಜೆ ಮುಗಿಸಿ ವಿದ್ಯಾಕೇಂದ್ರಕ್ಕೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು: ಬಜಿರೆ ಪಿ.ಎಂ.ಶ್ರೀ ಶಾಲಾ ಪ್ರಾರಂಭೋತ್ಸವ: ಶಾಲೆಯಲ್ಲಿ ಮಕ್ಕಳ ಕಲರವ-ಪಾಲಕರ ಸಂಭ್ರಮ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya
error: Content is protected !!