25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

ಬೆಳ್ತಂಗಡಿ: ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪರಿಹಾರಧನ ಪಡೆದುಕೊಂಡ ಮನೆ,ಕಟ್ಟಡಗಳ ಮಾಲೀಕರ, ಅನುಭೋಗದಾರರ ಮನೆ,ಕಟ್ಟಡಗಳ ಆಸ್ತಿ ಹಾಗೂ ಆಸ್ತಿಗಳ ಕದ ನಂಬ್ರ, ಕಟ್ಟಡ ತೆರಿಗೆ ಹಾಗೂ ಆಸ್ತಿ ಸಂಖ್ಯೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯತೆಯಿಂದ ನಿಯಮಾವಳಿಯಂತೆ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಪಂಚಾಯತುಗಳ ಅಭಿವೃದ್ಧಿಗಳಿಗೆ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಮಾಡಿದ್ದಾರೆ.

ಪೂಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅಗಲೀಕರಣ ಕಾಮಗಾರಿ ಕೆಲಸಗಳು ನಡೆಯುತ್ತಿದ್ದು, ಸದರಿ ಕಾಮಗಾರಿ ಮಾಡಲು ವಾಸ್ತವ್ಯ ಮತ್ತು ವಾಣಿಜ್ಯ ಸೇರಿದಂತೆ ಹಲವು ಕಟ್ಟಡಗಳನ್ನು ತೆರವು ಮಾಡಲು ಪರಿಹಾರ ಧನ ಪಡೆದುಕೊಂಡ ಬಹುತೇಕ ವಾಣಿಜ್ಯ ಕಟ್ಟಡ, ಮನೆಗಳ ಮಾಲೀಕರು ಕಾನೂನು ಬಾಹಿರವಾಗಿ ಸ್ಥಳೀಯ ಗ್ರಾಮ ಪಂಚಾಯತಿನಿಂದ ಮನೆ, ಕಟ್ಟಡ ರಚನೆ, ದುರಸ್ಥಿ, ಸೇರ್ಪಡೆ, ನವೀಕರಣ, ವಿಸ್ತರಣೆ ಮಾಡುವ ಬಗ್ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಂಡು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ಆದರೆ ಕಾನೂನು ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದಿಂದ ಪರಿಹಾರದ ಹಣ ಪಡೆದುಕೊಂಡ ಮಾಲೀಕರಿಗೆ ಅನುಮೋದನೆ ನೀಡಬಾರದು ಹಾಗೂ ಮನೆ, ವಾಣಿಜ್ಯ ಕಟ್ಟಡಗಳ ಕದ ನಂಬರ್, ಕಟ್ಟಡ ತೆರಿಗೆ, ಆಸ್ತಿ ಸಂಖ್ಯೆಯನ್ನು ರದ್ದುಪಡಿಸಿ ಅಕ್ರಮ ಕಟ್ಟಡಗಳ ಕಾಮಗಾರಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕಾಗಿ ಪ್ರತೀಕ್ ಅಂಕಾಜೆ ಇವರು ಮನವಿ ಮಾಡಿದ್ದು, ಇದರ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಜಿರೆ, ಕುವೆಟ್ಟು, ಮಡಂತ್ಯಾರು, ಧರ್ಮಸ್ಥಳ, ಚಾರ್ಮಾಡಿ, ನಿಡ್ಲೆ, ಕೊಕ್ಕಡ, ಬಳಂಜ, ಅಳದಂಗಡಿ, ಸುಲ್ಕೇರಿ ಮತ್ತು ನಾರಾವಿಎ ಪಂಚಾಯತುಗಳಿಗೆ ಕಳುಹಿಸಿದ ಆದೇಶದಲ್ಲಿ ಸೂಚಿಸಲಾಗಿದೆ.

Related posts

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya
error: Content is protected !!