25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

ಉಜಿರೆ: ಇತಿಹಾಸ ಪ್ರಸಿದ್ದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕರು,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ,ವಿಜಯ ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಕೆ. ಮೋಹನ್ ಕುಮಾರ್ ರವರ ವಿಭಿನ್ನ ಕಲ್ಪನೆಯೊಂದಿಗೆ ನಿರ್ಮಾಣಗೊಂಡು, ವಿಶೇಷ ಆಕರ್ಷಣೆಯೊಂದಿಗೆ ಜನರ ಮನಸೂರೆಗೊಳ್ಳುತ್ತಿರುವ “ಸುಪ್ರಸಾದ” ಭೋಜನ ಶಾಲೆಯಲ್ಲಿ ಅನ್ನದಾನ ಸೇವೆ ಮಾಡಲಿಚ್ಚಿಸುವ ಭಕ್ತಾಧಿಗಳಿಗೆ “ಮುಷ್ಠಿ ಅಕ್ಕಿ” ಎಂಬ ವಿಶೇಷ ಸೇವೆ ನಡೆಯುತ್ತಿದೆ.

ಭಾರತೀಯ ಪರಂಪರೆಯಲ್ಲಿ ಧರ್ನಕಾರ್ಯಗಳಿಗೆ ವಿಶೇಷ ಸ್ಥಾನಮಾನವಿದೆ‌. ಬ್ರಹ್ಮಕಲಶೋತ್ಸವದ ಸುಪ್ರಸಾದ ಭೋಜನ ಶಾಲೆಯ ಶ್ರೀ ಅನ್ನ ಪೂರ್ಣೇಶ್ವರಿಯ ಗುಡಿಯ ಸನ್ನಿಧಿಯಲ್ಲಿ ಈ ವಿಶೇಷ ಸೇವೆ ನಡೆಯುತ್ತಿದ್ದು ,ಅನ್ನದಾನ ಸೇವೆ ಮಾಡಲು ಇಚ್ಚಿಸುವವರು ಈ ಸೇವೆಯಲ್ಲಿ ಕೈ ಜೋಡಿಸಬಹುದಾಗಿದೆ.

ಈಗಾಗಲೇ ಕ್ಷೇತ್ರಕ್ಕೆ ಆಗಮಿಸುವ ಸ್ವಾಮೀಜಿಯವರು,ಗಣ್ಯರು,ಭಕ್ತರು ಸುಪ್ರಸಾದ ಭೋಜನಾಲಯದ ಅನ್ನಪೂರ್ಣೆಶ್ವರಿ ಗುಡಿಯಲ್ಲಿ ಕಲಶಗೆ ಅಕ್ಕಿ ಸಮರ್ಪಿಸುತ್ತಿದ್ದಾರೆ.ಪ್ರತಿನಿತ್ಯ ಸಾವಿರಾರು ಪ್ರಮಾಣದಲ್ಲಿ ಭಕ್ತರು ಶ್ರೀ ಜನಾರ್ದನ ಸ್ವಾಮಿ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಆಗಮಿಸುತ್ತಿದ್ದು ಸುಪ್ರಸಾದ ಭೋಜನಾಲಯದಲ್ಲಿ ಅನ್ನ ಪ್ರಸಾದ ಸ್ವೀಕರಿಸುತ್ತಿದ್ದಾರೆ.

Related posts

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!