July 23, 2026
ಸಮಸ್ಯೆ

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

ಕೊಕ್ಕಡ: ರೈತರಿಗೆ 2024-25 ಸಾಲಿನ ಬೆಳೆ ವಿಮೆ ಲಭಿಸಿಲ್ಲ ಎಂದು ಆರೋಪಿಸಿ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಗೆ ಮನವಿ ಪತ್ರ ಕಳುಹಿಸಲಾಗಿತ್ತು.

ಸಿ ಸಿ ಬ್ಯಾಂಕ್‌ ಅಧ್ಯಕ್ಷರು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಿಂದ ಬೆಳೆ ವಿಮೆ ಕಂಪನಿಗೆ ಡಿಸಿ ಕಛೇರಿ ಮುಂದೆ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಂಪನಿಯು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅವರಿಗೆ ಉತ್ತರ ನೀಡಿದೆ. ಕಂಪನಿಯು ನೀಡಿದ ಉತ್ತರದಲ್ಲಿ, ಬೆಳೆ ನಷ್ಟದ ಮೌಲ್ಯಮಾಪನವನ್ನು ಆಧುನಿಕ ತಂತ್ರಜ್ಞಾನಗಳ ಆಧಾರದ ಮೇಲೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. ಆಟೋಮೇಟೆಡ್ ವೆದರ್ ಸ್ಟೇಷನ್ (AWS) ಮೂಲಕ ಸಂಗ್ರಹವಾಗುವ ಹವಾಮಾನ ಮಾಹಿತಿಯನ್ನೂ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಕೇಂದ್ರ (KSNDMC) ನೀಡುವ ಅಂಕಿಅಂಶಗಳನ್ನೂ ಆಧಾರವಾಗಿಟ್ಟುಕೊಂಡು ಬೆಳೆ ನಷ್ಟವನ್ನು ಪರಿಶೀಲಿಸಲಾಗುತ್ತದೆ. ಆದರೆ ಅಂಕಿ ಅಂಶಗಳು ಇನ್ನು ಬಂದಿಲ್ಲ ಎಂದು ಕಂಪನಿ ತಿಳಿಸಿದೆ. ಈ ಮಾಹಿತಿಗಳ ಆಧಾರದ ಮೇಲೆ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಕೊಕ್ಕಡ ಗ್ರಾಮದ ರೈತರಿಗೆ ಬೆಳೆ ವಿಮೆ ಸಿಗದಿರುವ ಬಗ್ಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯಿಂದ ಈ ಸ್ಪಷ್ಟನೆ ನೀಡಲಾಗಿದೆ.

Related posts

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya
error: Content is protected !!