25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

ಕೊಕ್ಕಡ: ರೈತರಿಗೆ 2024-25 ಸಾಲಿನ ಬೆಳೆ ವಿಮೆ ಲಭಿಸಿಲ್ಲ ಎಂದು ಆರೋಪಿಸಿ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಗೆ ಮನವಿ ಪತ್ರ ಕಳುಹಿಸಲಾಗಿತ್ತು.

ಸಿ ಸಿ ಬ್ಯಾಂಕ್‌ ಅಧ್ಯಕ್ಷರು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಿಂದ ಬೆಳೆ ವಿಮೆ ಕಂಪನಿಗೆ ಡಿಸಿ ಕಛೇರಿ ಮುಂದೆ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಂಪನಿಯು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅವರಿಗೆ ಉತ್ತರ ನೀಡಿದೆ. ಕಂಪನಿಯು ನೀಡಿದ ಉತ್ತರದಲ್ಲಿ, ಬೆಳೆ ನಷ್ಟದ ಮೌಲ್ಯಮಾಪನವನ್ನು ಆಧುನಿಕ ತಂತ್ರಜ್ಞಾನಗಳ ಆಧಾರದ ಮೇಲೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. ಆಟೋಮೇಟೆಡ್ ವೆದರ್ ಸ್ಟೇಷನ್ (AWS) ಮೂಲಕ ಸಂಗ್ರಹವಾಗುವ ಹವಾಮಾನ ಮಾಹಿತಿಯನ್ನೂ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಕೇಂದ್ರ (KSNDMC) ನೀಡುವ ಅಂಕಿಅಂಶಗಳನ್ನೂ ಆಧಾರವಾಗಿಟ್ಟುಕೊಂಡು ಬೆಳೆ ನಷ್ಟವನ್ನು ಪರಿಶೀಲಿಸಲಾಗುತ್ತದೆ. ಆದರೆ ಅಂಕಿ ಅಂಶಗಳು ಇನ್ನು ಬಂದಿಲ್ಲ ಎಂದು ಕಂಪನಿ ತಿಳಿಸಿದೆ. ಈ ಮಾಹಿತಿಗಳ ಆಧಾರದ ಮೇಲೆ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಕೊಕ್ಕಡ ಗ್ರಾಮದ ರೈತರಿಗೆ ಬೆಳೆ ವಿಮೆ ಸಿಗದಿರುವ ಬಗ್ಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯಿಂದ ಈ ಸ್ಪಷ್ಟನೆ ನೀಡಲಾಗಿದೆ.

Related posts

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya
error: Content is protected !!