23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು ಇದೆ ರಸ್ತೆಯಲ್ಲಿ ವಾಹನವೊಂದು ಸಂಚರಿಸುವಾಗ ಒಣಗಿರುವ ಮರದ ಕೊಂಬೆ ವಾಹನದ ಮೇಲೆ ಬಿದ್ದಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯರೊಬ್ಬರು ವಲಯ ಅರಣ್ಯ ಅಧಿಕಾರಿಗೆ ತಿಳಿಸಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಿ ಮೆಸ್ಕಾಂ ಇಲಾಖೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಕೊಡಬೇಕು ಎಂದು ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರಾದ ನಝೀರ್ ಆರೋಪಿಸಿದ್ದಾರೆ.

Related posts

ಮುಂಡೂರು ಮತ್ತು ಮಚ್ಚಿನ ಗ್ರಾಮಗಳಲ್ಲಿ ಮಣ್ಣು ಕುಸಿದು ಹಾನಿ ಉಂಟಾದ ಮನೆಗಳಿಗೆ ಭೇಟಿ

Suddi Udaya

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ನ್ಯಾಯತರ್ಪು: ಬೃಹತ್‌ ಗಾತ್ರದ ಹೆಬ್ಬಾವು ಕೋಳಿ ಗೂಡಿನಲ್ಲಿ ಪತ್ತೆ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

Suddi Udaya

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya
error: Content is protected !!