28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

ಬೆಳ್ತಂಗಡಿ: ಮಾ.06ರಂದು ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಜಿ ಎಸ್ ಟಿ ಉತ್ತಮ ಮಟ್ಟದಲ್ಲಿ ಸಂಗ್ರಹವಾಗಿದ್ದು ಸಹಜವಾಗಿ ಶಾಸನಬದ್ದವಾಗಿ ರಾಜ್ಯದ ಪಾಲಿಗೆ ಹೆಚ್ಚಿನ ಸಂಪನ್ಮೂಲ ಲಭ್ಯವಾಗಿದ್ದು ಅಸಮರ್ಪಕ ಆಡಳಿತ ನೀತಿಯಿಂದ ರಾಜಸ್ವ ಕೊರತೆಯುಂಟಾಗಿ ಮುಂಗಡ ಪತ್ರದಲ್ಲಿ ಪ್ರಸ್ತಾಪಿಸಿರುವ ಹೇರಳ ಸಾಲದಿಂದ ವಿತ್ತೀಯ ಕೊರತೆ ಸಾಲ ಹಾಗೂ ಸಾಲದ ಬಡ್ಡಿ ಮರುಪಾವತಿ ಸೇರಿದಂತೆ ಶ್ರೀ ಸಾಮಾನ್ಯನಿಗೆ ಹೊರೆಯಾಗಲಿದೆ.

ಕೃಷಿ ತೋಟಗಾರಿಕೆ ಸಹಕಾರ ಪಶುಸಂಗೋಪನೆ ಆರೋಗ್ಯ ವಲಯ ಒಳಗೊಂಡಂತೆ ಕರಾವಳಿ ಜನತೆಗೆ ಸಂಪೂರ್ಣ ನಿರಾಸೆ ತಂದ ಮುಂಗಡ ಪತ್ರ ಇದಾಗಿದೆಯೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ ಕಾಲೇಜು ವತಿಯಿಂದ ನಿವೃತ್ತ ಕರ್ನಲ್ ನಿತಿನ್ ಭಿಡೆ ಅವರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya
error: Content is protected !!