July 23, 2026
ಅಪರಾಧ ಸುದ್ದಿಸಮಸ್ಯೆ

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಅಜರಮಾರು ನಿವಾಸಿ ಹೈಡೋಸ್ ಮಗನಾದ ಕುಖ್ಯಾತ ಸರಣೆ ಕಳ್ಳ ಹಮೀದ್ ಕುಂಞಮೋನು@ ಜಾಫರ್ @ ಹಮೀದ್ @ ಲಾಡಿ ಹಮೀದ್(49) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಮಾಲತೇಶ್ ಅವರ ಸಹಕಾರದೊಂದಿಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಮತ್ತು ಸುದರ್ಶನ್ ಪವರ್ ಅವರು ಮಾ.2 ರಂದು ಬೆಳಗ್ಗೆ 12 ಗಂಟೆಗೆ ಸುಮಾರಿಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಳ್ಳನ ಇತಿಹಾಸ ಆರೋಪಿ ವಿರುದ್ಧ ಒಟ್ಟು ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 35 ಸರಣೆ ಕಳ್ಳತನ ಪ್ರಕರಣ ದಾಖಲಾಗಿದ್ದು. ಇದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 22 ಕಡೆಗಳಲ್ಲಿ ಬಂಧನದ ವಾರಂಟ್ ಹೊರಡಿಸಲಾಗಿತ್ತು. ಈತನ ಮೇಲೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 5 ಪ್ರಕರಣ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಶೃಂಗೇರಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೇಲೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಹರಿಹರಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕೊಡಗು ಜಿಲ್ಲೆಯ ಬಾಗಮಂಡಲ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

Suddi Udaya
error: Content is protected !!