July 23, 2026
ಸಮಸ್ಯೆ

ಮೂಡುಕೋಡಿ: ಮನೆಯಂಗಳದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಕಾಳಿಂಗ ಸರ್ಪ

ವೇಣೂರು: ಮೂಡುಕೋಡಿ ಗ್ರಾಮದ ಬೊಮ್ಮನಟ್ಟ ವಿಶ್ವನಾಥ ಪೂಜಾರಿ ಅವರ ಮನೆಯ ಅಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.

ಮನೆ ಮಂದಿಯನ್ನು ಕ೦ಡ ಸರ್ಪ ಗದ್ದೆಯ ಪಕ್ಕದ ಗುಹೆಯಲ್ಲಿ ಅವಿತುಕೊಂಡದನ್ನು ಗಮನಿಸಿದ ಸ್ಥಳಿಯ ನಿವಾಸಿ ಸ೦ದೇಶ್ ಪಿ.ಎನ್. ಸ್ಥಳಿಯ ಗ್ರಾ.ಪಂ. ಸದಸ್ಯ ಅನೂಪ್ ಜೆ. ಪಾಯಸ್ ಅವರಿಗೆ ಮಾಹಿತಿ ನೀಡಿದ್ದಾರೆ.
ಅನೂಪ್ ಅವರು ವೇಣೂರು ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣ ಇಲಾಖೆಯ ಸಿಬ್ಬಂದಿ ಜೊತೆ ಸ್ಥಳಕ್ಕೆ ಆಗಮಿಸಿದರು. ಕಾಳಿಂಗ ಸರ್ಪ ಎ೦ದು ಖಚಿತಗೊಂಡು ವೇಣೂರು ಉಪವಲಯ ಅರಣ್ಯಾಧಿಕಾರಿ ಸುನಿಲ್ ಕುಮಾರ್ ಮಾರ್ಗದರ್ಶನದ೦ತೆ ಕೋಬ್ರಾ ಹಿಡಿಯಲು ಕಾವಳಕಟ್ಟೆಯ ಸ್ನೇಕ್ ಪ್ರಸಾದ್ ಅವರನ್ನು ಕರೆಸಿಕೊ೦ಡು ಕಾಳಿ೦ಗನನ್ನು ಸೆರೆ ಹಿಡಿದು ರಕ್ಷಿಸಲಾಯಿತು. ಅಪಾಯಕಾರಿ ಕೋಬ್ರಾನನ್ನು ಕೆಲವೇ ಘಂಟೆಗಳಲ್ಲಿ ಸೆರೆ ಹಿಡಿಯಲು ತುರ್ತಾಗಿ ಸಹಕರಿಸಿದ ಸದಸ್ಯ ಅನೂಪ್ ಜೆ. ಪಾಯಸ್ ರವರ ಕಾಳಜಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅರಣ್ಯ ಇಲಾಖಾ ಸಿಬ್ಬ೦ದಿ ರೋನಾಲ್ಡ್ ಡಿಸೋಜ ಸೇರಿ ಹಲವರು ಸಹಕರಿಸಿದರು.

Related posts

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

Suddi Udaya
error: Content is protected !!