23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕಪ್ರಮುಖ ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬ್ರಹ್ಮರಥ, ಪುಷ್ಪರಥ ಆಗಮನ – ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದ ಸಾವಿರಾರು ಭಕ್ತಗಣ

ಉಜಿರೆ: ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಮಾ.8ರಂದು ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥ ಹಾಗೂ ಪುಷ್ಪರಥವನ್ನು ನಿನ್ನೆ (ಮಾ.5)ಸಂಜೆ ದೇಗುಲಕ್ಕೆ ತರಲಾಯಿತು.

ಪ್ರಸ್ತುತ ಅಮೆರಿಕದ ಶ್ರೀ ವೆಂಕಟಕೃಷ್ಣ ಮಂದಿರದ ಅರ್ಚಕ, ಉಜಿರೆ ನಿವಾಸಿ ವೇದಮೂರ್ತಿ ಕಿರಣ್ ರಾವ್ ಮತ್ತು ಮನೆಯವರು ಸಮರ್ಪಣೆ ಮಾಡಲಿರುವ ಬ್ರಹ್ಮರಥವನ್ನು ಕೋಟೇಶ್ವರದ ಕುಂಭಾಶಿಯಲ್ಲಿ ನಿರ್ಮಿಸಲಾಗಿದ್ದು, ಅಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಟ್ರಕ್ ಮೂಲಕ ದೇಗುಲದ ವಠಾರಕ್ಕೆ ತರಲಾಯಿತು.

ಉಜಿರೆ ಬೆನಕ ಕನ್‌ಸ್ಟ್ರಕ್ಷನ್ ಮಾಲೀಕ ಗಣೇಶ್ ಗೌಡ ಮತ್ತು ಮನೆಯವರು ಸಮರ್ಪಿಸಲಿರುವ ಪುಷ್ಪರಥವನ್ನು ಕಾರ್ಕಳದಿಂದ ತರಲಾಯಿತು. ಬ್ರಹ್ಮರಥ ಮಡಂತ್ಯಾರು ಮೂಲಕ ಹಾಗೂ ಪುಷ್ಪರಥ ಅಳದಂಗಡಿ ಮೂಲಕ ಆಗಮಿಸಿ, ಗುರುವಾಯನಕೆರೆಯ ನವಶಕ್ತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಎರಡೂ ರಥಗಳನ್ನು ಅಲ್ಲಿಂದ ಒಟ್ಟಾಗಿ ತರಲಾಯಿತು.

ಉಜಿರೆಯ ಜನಾರ್ದನ ಶಾಲೆಯಿಂದ ರಥಗಳನ್ನು, ಕೀಲುಕುದುರೆ, ಸುಡುಮದ್ದು, ಕುಣಿತ ಭಜನೆ, ಮೆರವಣಿಗೆ ಮೂಲಕ ಶ್ರೀ ಜನಾರ್ದನನ ನಾಮಸ್ಮರಣೆಯೊಂದಿಗೆ ಸ್ವಾಗತಿಸಿ ದೇವಸ್ಥಾನದ ವಠಾರಕ್ಕೆ ತರಲಾಯಿತು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ರಾಜೇಶ್ ಶೆಟ್ಟಿ ನವಶಕ್ತಿ, ಕಿರಣ್ ರಾವ್ ಮತ್ತು ಕುಟುಂಬಸ್ಥರು, ಗಣೇಶ್ ಗೌಡ ಮತ್ತು ಕುಟುಂಬಸ್ಥರು, ನಾರಾಯಣ ಗೌಡ ಕೊಳಂಬೆ, ಉಮೇಶ್ ಶೆಟ್ಟಿ, ರವಿ ಚಕ್ಕಿತ್ತಾಯ, ರಘುರಾಮ ಶೆಟ್ಟಿ, ವಸಂತ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ರಾಜೇಶ್ ಪೈ, ರವಿ ಕುಮಾರ್ ಬರಮೇಲು, ಹುಕುಂ ರಾಮ್ ಪಟೇಲ್, ಬೆಂಗಳೂರು ಸಮಿತಿ ಅಧ್ಯಕ್ಷ ಮಂಜುನಾಥ್ ಕನ್ಯಾಡಿ, ಸೇರಿದಂತೆ ನಾನಾ ಸಮಿತಿಗಳ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
error: Content is protected !!