22.6 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕವರದಿ

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ ಮಂಜುನಾಸ ಭಟ್ ಅಂತರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ. ೪ರಂದು ಸಂಪನ್ನ ಗೊಂಡಿತು.

ಮಾ.೪ರಿAದ ಮೊದಲುಗೊಂಡು ಮಾ.೬ ವರೆಗೆ ಸಂಭ್ರಮದಿAದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ನಡೆಯಿತು.ಮಾ.೬ ರಂದು ಕರಾಯ ಶ್ರೀ ದೇವಿ ಕೃಪಾ ಮೆಲೋಡೀಸ್ ಇವರಿಂದ ಭಕಿ ರಸಮಂಜರಿ ಹಾಗೂ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿರುವ ಶಮಿಕ ಎಂ. ಕೆ. ಚಿವರಿಂದ ಗಾಂಧಾರಿ ವಿದ್ಯೆಯಲ್ಲಿ ಸ್ಯಾಂಡ್ ಆರ್ಟ್ ಪ್ರದರ್ಶನ ಗೊಂಡಿತು.

ಸಂಜೆ ಗೋಂದೋಳು ಪೂಜೆಯ ವಿಧಿ-ವಿಧಾನ ಪ್ರಾರಂಭ, ಗುಮ್ಮಟೆ ಹಾಡು, ರಾತ್ರಿ ಗೋಂದೋಳು ಪೂಜೆ, ದೇವಿ ದರ್ಶನ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು.ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷ ಚೆನ್ನಕೇಶವ ಅರಸಮಜಲ್, ರಾಘವ ನಾಯ್ಕ ಶ್ರೀ ಜಲದುರ್ಗಾ, ಪ್ರಧಾನ ಕಾರ್ಯದರ್ಶಿ ಚಿದಾನಂದ ನಾಯ್ಕ ಕುಪೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಪ್ರದೀಪ ನಾಯ್ಕ ಆನಡ್ಕ ಹಾಗೂ ಕೃಷ್ಣಪ್ಪ ನಾಯ್ಕ, ಕೋಶಾಧಿಕಾರಿ ಪುಷ್ಪಾನಂದ ನಾಯ್ಕ ಗಜಂತೋಡಿ, ಉರುವಾಲು ಮಹಮ್ಮಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ವಿನೋದ್ ನಾಯ್ಕ ಶ್ರೀ ಜಲದುರ್ಗಾ, ಉಪಾಧ್ಯಕ್ಷ ಚಿದಾನಂದ ನಾಯ್ಕ ಮತ್ರಕುಮೇರು, ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಲ್ಕೆ, ಉರುವಾಲು ಮಹಮ್ಮಾಯಿ ಮಾರಟಿ ಸಮಾಜ ಸೇವಾ ಸಂಘ ಅಧ್ಯಕ್ಷ ಸೀತಾರಾಮ ನಾಯ್ಕ, ಕೋಶಾಧಿಕಾರಿ ಹರೀಶ್ ನಾಯ್ಕ್ ಕುಪ್ಪೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಹೆಚ್.ಎಲ್, ಉಪಾಧ್ಯಕ್ಷ ಶೇಖರ್ ನಾಯ್ಕ ಹಲೇಜಿ, ಕಾರ್ಯದರ್ಶಿ ಕಿಶನ್ ನಾಯ್ಕ ಮಜ್ಜೆ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಆನಡ್ಕ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya
error: Content is protected !!