25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ ಮಂಜುನಾಸ ಭಟ್ ಅಂತರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ. ೪ರಂದು ಸಂಪನ್ನ ಗೊಂಡಿತು.

ಮಾ.೪ರಿAದ ಮೊದಲುಗೊಂಡು ಮಾ.೬ ವರೆಗೆ ಸಂಭ್ರಮದಿAದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ನಡೆಯಿತು.ಮಾ.೬ ರಂದು ಕರಾಯ ಶ್ರೀ ದೇವಿ ಕೃಪಾ ಮೆಲೋಡೀಸ್ ಇವರಿಂದ ಭಕಿ ರಸಮಂಜರಿ ಹಾಗೂ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿರುವ ಶಮಿಕ ಎಂ. ಕೆ. ಚಿವರಿಂದ ಗಾಂಧಾರಿ ವಿದ್ಯೆಯಲ್ಲಿ ಸ್ಯಾಂಡ್ ಆರ್ಟ್ ಪ್ರದರ್ಶನ ಗೊಂಡಿತು.

ಸಂಜೆ ಗೋಂದೋಳು ಪೂಜೆಯ ವಿಧಿ-ವಿಧಾನ ಪ್ರಾರಂಭ, ಗುಮ್ಮಟೆ ಹಾಡು, ರಾತ್ರಿ ಗೋಂದೋಳು ಪೂಜೆ, ದೇವಿ ದರ್ಶನ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು.ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷ ಚೆನ್ನಕೇಶವ ಅರಸಮಜಲ್, ರಾಘವ ನಾಯ್ಕ ಶ್ರೀ ಜಲದುರ್ಗಾ, ಪ್ರಧಾನ ಕಾರ್ಯದರ್ಶಿ ಚಿದಾನಂದ ನಾಯ್ಕ ಕುಪೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಪ್ರದೀಪ ನಾಯ್ಕ ಆನಡ್ಕ ಹಾಗೂ ಕೃಷ್ಣಪ್ಪ ನಾಯ್ಕ, ಕೋಶಾಧಿಕಾರಿ ಪುಷ್ಪಾನಂದ ನಾಯ್ಕ ಗಜಂತೋಡಿ, ಉರುವಾಲು ಮಹಮ್ಮಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ವಿನೋದ್ ನಾಯ್ಕ ಶ್ರೀ ಜಲದುರ್ಗಾ, ಉಪಾಧ್ಯಕ್ಷ ಚಿದಾನಂದ ನಾಯ್ಕ ಮತ್ರಕುಮೇರು, ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಲ್ಕೆ, ಉರುವಾಲು ಮಹಮ್ಮಾಯಿ ಮಾರಟಿ ಸಮಾಜ ಸೇವಾ ಸಂಘ ಅಧ್ಯಕ್ಷ ಸೀತಾರಾಮ ನಾಯ್ಕ, ಕೋಶಾಧಿಕಾರಿ ಹರೀಶ್ ನಾಯ್ಕ್ ಕುಪ್ಪೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಹೆಚ್.ಎಲ್, ಉಪಾಧ್ಯಕ್ಷ ಶೇಖರ್ ನಾಯ್ಕ ಹಲೇಜಿ, ಕಾರ್ಯದರ್ಶಿ ಕಿಶನ್ ನಾಯ್ಕ ಮಜ್ಜೆ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಆನಡ್ಕ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya
error: Content is protected !!