ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ ಅಂಗವಾಗಿ ಕಡೆಯ ದಿನದ ಧಾರ್ಮಿಕ ಸಭೆ ಕ್ಷೇತ್ರದ ವಠಾರದಲ್ಲಿ ನಡೆಯಿತು.
ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ದೀಪ ಪ್ರಜ್ವಲಿಸಿದರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಶ್ರೀಕಾಂತ್ ಶೆಟ್ಟಿ ಕಾರ್ಕಳ ಧಾರ್ಮಿಕ ಉಪನ್ಯಾಸ ನೀಡಿದರು.

ಭಾಜಪ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸ ಯೋಗೀಶ್ ಪೂಜಾರಿ ಕಡ್ತಿಲ, ಜಿಲ್ಲಾ ಮರಾಟಿ ಸಂಘದ ಅಧ್ಯಕ್ಷ ಸುಂದರ ನಾಯ್ಕ, ವಕೀಲ ಸುಬ್ರಹ್ಮಣ್ಯ ಅಗರ್ತ, ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯನಂದ ಕಲ್ಲಾಪು, ಉಪಾಧ್ಯಕ್ಷ ಸುನೀಲ್ ಅಣಾವು, ಮಾಜಿ ತಾ. ಪಂ. ಸದಸ್ಯ ಈಶ್ವರ್ ಭಟ್ ಮಾಯಿಲ್ತೋಡಿ, ಬೆಳ್ತಂಗಡಿ ವಕೀಲ ಸತೀಶ್ ನಾಯ್ಕ ಎಚ್. ಎಲ್., ಪಿಲಿಗೂಡು ಚಾಮುಂಡೇಶ್ವರಿ ಕ್ಷೇತ್ರದ ಪದ್ಮನಾಭ ಶಿಲ್ಪಿ, ಬೆಳ್ತಂಗಡಿ ವೈದ್ಯಾಧಿಕಾರಿ ಡಾ. ರಶ್ಮಿ, ವಕೀಲ ಉದಯ್ ಕುಮಾರ್, ಮಾಹಮ್ಮಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ವಿನೋದ್ಜ ನಾಯ್ಕ ಜಲದುರ್ಗಾ, ಮಾಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ನಾಯ್ಕ ಹಾಗೂ ಪ್ರತಿಷ್ಠಾ ಮಹೋತ್ಸವ ಉಪಾಧ್ಯಕ್ಷ ರಾಘವ ನಾಯ್ಕ ಉಪಸ್ಥಿತರಿದ್ದರು . ಆರ್ಥಿಕ ಸಮಿತಿ ಸಂಚಾಲಕ ಪ್ರಭಾಕರ ಗೌಡ ಸ್ವಾಗತಿಸಿ , ಪ್ರತಿಷ್ಠಾ ಮಹೋತ್ಸವ ಅಧ್ಯಕ್ಷ ಚೆನ್ನಕೇಶವ ಅರಸಮಜಲ್ ಮುಂಡಾಜೆ ವಂದಿಸಿ, ಮಾಧವ ಗೌಡ ನಿರೂಪಿಸಿದರು.











