July 23, 2026
ಧಾರ್ಮಿಕಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ವಿದ್ಯಾ ಸಂಸ್ಥೆಗೆ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಶ್ರೀ ಭೇಟಿ – ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಹೊಸ ನಗರ ಶ್ರೀ ಶಂಕರಾಚಾರ್ಯ ಮಹಾ ಸಂಸ್ಥಾನ, ಶ್ರೀ ಸಂಸ್ಥಾನ ಗೋಕರ್ಣ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರು ಭೇಟಿ ನೀಡಿ, ಆಶೀರ್ವಚನ ನೀಡಿದರು.

ಅರಮಲೆ ಬೆಟ್ಟ ಕಾಲೇಜು ಆವರಣದಲ್ಲಿ ನಡೆದ ಶ್ರೀ ಗುರುಗಳ ದಿವ್ಯ ಸಾನಿದ್ಯ ಹಾಗೂ ಪಾದುಕಾ ಪೂಜೆಯ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಗುಣಮಟ್ಟದ ಹಾಗೂ ಸಂಸ್ಕಾರ ಭರಿತ ಶಿಕ್ಷಣದಿಂದ ರಾಷ್ಟ್ರ ಸೇವೆ ಮಾಡುವಂತ ಮನೋಭಾವ ಮಕ್ಕಳಲ್ಲಿ ಮೂಡುತ್ತದೆ. ಅಂಥ ಶಿಕ್ಷಣ ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿದೆ. ರಾಷ್ಟ್ರದ ಭವಿಷ್ಯ ನಿರ್ಮಿಸುವ ಎಕ್ಸೆಲ್ ನಂತಹ ಸಂಸ್ಥೆಗಳ ಜೊತೆ ಶ್ರೀ ಸಂಸ್ಥಾನ ಯಾವತ್ತೂ ಜೊತೆಗಿರುತ್ತದೆ ಎಂದರು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ ಮಾತಾ ಪಿತರಾದ ಶುಭಲತಾ – ಸತೀಶ್ ಕುಮಾರ್ ಜೈನ್ ಅವರು ಗುರುಗಳ ಪಾದ ಪೂಜೆ ನೆರವೇರಿಸಿದರು. ಸುಮಂತ್ ಕುಮಾರ್ ಜೈನ್ ಅವರು ಸ್ವಾಮಿಗಳಿಗೆ ಗೌರವಾರ್ಪಣೆ ಸಲ್ಲಿಸಿ, ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ರಾಮಚಂದ್ರಾಪುರ ಮಠದ ಗುರುಗಳು ನಮ್ಮ ಸಂಸ್ಥೆಗೆ ಪಾದಾರ್ಪಣೆ ಮಾಡಿರುವುದು ನಮ್ಮ ಪುಣ್ಯ ಎಂದರು. ಬಳಿಕ ಮಂತ್ರಾಕ್ಷತೆ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಅರಮಲೆಬೆಟ್ಟ ಕ್ಯಾಂಪಸ್ ನ ಪ್ರಾಚಾರ್ಯರಾದ ಡಾ.ಪ್ರಜ್ವಲ್ ಕಜೆ, ಆಡಳಿತ ಮಂಡಳಿಯ ಸಹನಾ ಜೈನ್, ಆಡಳಿತಾಧಿಕಾರಿ ಕೀರ್ತಿನಿಧಿ ಜೈನ್, ವೇಣೂರು ವಿದ್ಯೋದಯ ವಿದ್ಯಾ ಸಂಸ್ಥೆಗಳ ಆಡಳಿತಾಧಿಕಾರಿ ಶಾಂತಿರಾಜ್ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ , ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related posts

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya
error: Content is protected !!