ಉಜಿರೆ: ಮಾ. 5 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆಯ ರಾಷ್ಟ್ರೀಯ ಸೇವಾ ಯೋಜನ ಘಟಕ, ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಉಜಿರೆಯ ಯಶೋವನಕ್ಕೆ ಭೇಟಿ ಕೊಡಲಾಯಿತು.
ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಂಜುಶ್ರೀ, ಸಹಾಯಕ ಪ್ರಾದ್ಯಾಪಕರು, ಸಸ್ಯಶಾಸ್ತ್ರ ವಿಭಾಗ- ಎಸ್ ಡಿ ಎಂ ಕಾಲೇಜು, ಉಜಿರೆ ಇವರು ವಿಧ್ಯಾರ್ಥಿಗಳಿಗೆ ವಿವಿಧ ಬಗೆಯ ಸಸ್ಯಗಳ ಬಗ್ಗೆ ಮತ್ತು ಔಷಧೀಯ ಗುಣವುಳ್ಳ ಗಿಡ ಹಾಗೂ ಮರಗಳ ಬಗ್ಗೆ ಪರಿಚಯಿಸಿ ಕೊಟ್ಟರು.
ಈ ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ನ ಯೋಜನಾಧಿಕಾರಿಗಳಾದ ಪ್ರಕಾಶ್, ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ, ಎನ್ ಎಸ್ ಎಸ್ ನ ಉಪಯೋಜನಾಧಿಕಾರಿ ಲೋಹಿತ್ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.











