23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

ಕೊಕ್ಕಡ: ರೈತರಿಗೆ 2024-25 ಸಾಲಿನ ಬೆಳೆ ವಿಮೆ ಲಭಿಸಿಲ್ಲ ಎಂದು ಆರೋಪಿಸಿ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಗೆ ಮನವಿ ಪತ್ರ ಕಳುಹಿಸಲಾಗಿತ್ತು.

ಸಿ ಸಿ ಬ್ಯಾಂಕ್‌ ಅಧ್ಯಕ್ಷರು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಿಂದ ಬೆಳೆ ವಿಮೆ ಕಂಪನಿಗೆ ಡಿಸಿ ಕಛೇರಿ ಮುಂದೆ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಂಪನಿಯು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅವರಿಗೆ ಉತ್ತರ ನೀಡಿದೆ. ಕಂಪನಿಯು ನೀಡಿದ ಉತ್ತರದಲ್ಲಿ, ಬೆಳೆ ನಷ್ಟದ ಮೌಲ್ಯಮಾಪನವನ್ನು ಆಧುನಿಕ ತಂತ್ರಜ್ಞಾನಗಳ ಆಧಾರದ ಮೇಲೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. ಆಟೋಮೇಟೆಡ್ ವೆದರ್ ಸ್ಟೇಷನ್ (AWS) ಮೂಲಕ ಸಂಗ್ರಹವಾಗುವ ಹವಾಮಾನ ಮಾಹಿತಿಯನ್ನೂ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಕೇಂದ್ರ (KSNDMC) ನೀಡುವ ಅಂಕಿಅಂಶಗಳನ್ನೂ ಆಧಾರವಾಗಿಟ್ಟುಕೊಂಡು ಬೆಳೆ ನಷ್ಟವನ್ನು ಪರಿಶೀಲಿಸಲಾಗುತ್ತದೆ. ಆದರೆ ಅಂಕಿ ಅಂಶಗಳು ಇನ್ನು ಬಂದಿಲ್ಲ ಎಂದು ಕಂಪನಿ ತಿಳಿಸಿದೆ. ಈ ಮಾಹಿತಿಗಳ ಆಧಾರದ ಮೇಲೆ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಕೊಕ್ಕಡ ಗ್ರಾಮದ ರೈತರಿಗೆ ಬೆಳೆ ವಿಮೆ ಸಿಗದಿರುವ ಬಗ್ಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯಿಂದ ಈ ಸ್ಪಷ್ಟನೆ ನೀಡಲಾಗಿದೆ.

Related posts

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

Suddi Udaya

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya
error: Content is protected !!