25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

ಕೊಕ್ಕಡ: ರೈತರಿಗೆ 2024-25 ಸಾಲಿನ ಬೆಳೆ ವಿಮೆ ಲಭಿಸಿಲ್ಲ ಎಂದು ಆರೋಪಿಸಿ, ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮೂಲಕ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಗೆ ಮನವಿ ಪತ್ರ ಕಳುಹಿಸಲಾಗಿತ್ತು.

ಸಿ ಸಿ ಬ್ಯಾಂಕ್‌ ಅಧ್ಯಕ್ಷರು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಿಂದ ಬೆಳೆ ವಿಮೆ ಕಂಪನಿಗೆ ಡಿಸಿ ಕಛೇರಿ ಮುಂದೆ ಸಾವಿರಾರು ಜನ ಸೇರಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಂಪನಿಯು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅವರಿಗೆ ಉತ್ತರ ನೀಡಿದೆ. ಕಂಪನಿಯು ನೀಡಿದ ಉತ್ತರದಲ್ಲಿ, ಬೆಳೆ ನಷ್ಟದ ಮೌಲ್ಯಮಾಪನವನ್ನು ಆಧುನಿಕ ತಂತ್ರಜ್ಞಾನಗಳ ಆಧಾರದ ಮೇಲೆ ಮಾಡಲಾಗುತ್ತಿದೆ ಎಂದು ತಿಳಿಸಿದೆ. ಆಟೋಮೇಟೆಡ್ ವೆದರ್ ಸ್ಟೇಷನ್ (AWS) ಮೂಲಕ ಸಂಗ್ರಹವಾಗುವ ಹವಾಮಾನ ಮಾಹಿತಿಯನ್ನೂ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಕೇಂದ್ರ (KSNDMC) ನೀಡುವ ಅಂಕಿಅಂಶಗಳನ್ನೂ ಆಧಾರವಾಗಿಟ್ಟುಕೊಂಡು ಬೆಳೆ ನಷ್ಟವನ್ನು ಪರಿಶೀಲಿಸಲಾಗುತ್ತದೆ. ಆದರೆ ಅಂಕಿ ಅಂಶಗಳು ಇನ್ನು ಬಂದಿಲ್ಲ ಎಂದು ಕಂಪನಿ ತಿಳಿಸಿದೆ. ಈ ಮಾಹಿತಿಗಳ ಆಧಾರದ ಮೇಲೆ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಕೊಕ್ಕಡ ಗ್ರಾಮದ ರೈತರಿಗೆ ಬೆಳೆ ವಿಮೆ ಸಿಗದಿರುವ ಬಗ್ಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಟಾಟಾ ಎಐಜಿ ಇನ್ಸೂರೆನ್ಸ್ ಕಂಪನಿಯಿಂದ ಈ ಸ್ಪಷ್ಟನೆ ನೀಡಲಾಗಿದೆ.

Related posts

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!