September 6, 2026
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು ಇದೆ ರಸ್ತೆಯಲ್ಲಿ ವಾಹನವೊಂದು ಸಂಚರಿಸುವಾಗ ಒಣಗಿರುವ ಮರದ ಕೊಂಬೆ ವಾಹನದ ಮೇಲೆ ಬಿದ್ದಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯರೊಬ್ಬರು ವಲಯ ಅರಣ್ಯ ಅಧಿಕಾರಿಗೆ ತಿಳಿಸಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಿ ಮೆಸ್ಕಾಂ ಇಲಾಖೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಕೊಡಬೇಕು ಎಂದು ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರಾದ ನಝೀರ್ ಆರೋಪಿಸಿದ್ದಾರೆ.

Related posts

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya
error: Content is protected !!