July 14, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

ಬೆಳ್ತಂಗಡಿ: ಮಾ.06ರಂದು ಬಜೆಟ್ ಭಾಷಣದ ಆರಂಭದ ಮುನ್ನುಡಿಯಲ್ಲೇ ಕೇಂದ್ರ ಸರಕಾರವನ್ನು ಟೀಕಿಸಿ ಒಕ್ಕೂಟ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ ಕರ್ನಾಟಕ ಕಾಂಗ್ರೆಸ್ ಸರಕಾರದ ಮುಂಗಡ ಪತ್ರ ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ ಆಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಜಿ ಎಸ್ ಟಿ ಉತ್ತಮ ಮಟ್ಟದಲ್ಲಿ ಸಂಗ್ರಹವಾಗಿದ್ದು ಸಹಜವಾಗಿ ಶಾಸನಬದ್ದವಾಗಿ ರಾಜ್ಯದ ಪಾಲಿಗೆ ಹೆಚ್ಚಿನ ಸಂಪನ್ಮೂಲ ಲಭ್ಯವಾಗಿದ್ದು ಅಸಮರ್ಪಕ ಆಡಳಿತ ನೀತಿಯಿಂದ ರಾಜಸ್ವ ಕೊರತೆಯುಂಟಾಗಿ ಮುಂಗಡ ಪತ್ರದಲ್ಲಿ ಪ್ರಸ್ತಾಪಿಸಿರುವ ಹೇರಳ ಸಾಲದಿಂದ ವಿತ್ತೀಯ ಕೊರತೆ ಸಾಲ ಹಾಗೂ ಸಾಲದ ಬಡ್ಡಿ ಮರುಪಾವತಿ ಸೇರಿದಂತೆ ಶ್ರೀ ಸಾಮಾನ್ಯನಿಗೆ ಹೊರೆಯಾಗಲಿದೆ.

ಕೃಷಿ ತೋಟಗಾರಿಕೆ ಸಹಕಾರ ಪಶುಸಂಗೋಪನೆ ಆರೋಗ್ಯ ವಲಯ ಒಳಗೊಂಡಂತೆ ಕರಾವಳಿ ಜನತೆಗೆ ಸಂಪೂರ್ಣ ನಿರಾಸೆ ತಂದ ಮುಂಗಡ ಪತ್ರ ಇದಾಗಿದೆಯೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya
error: Content is protected !!