25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಸಮಸ್ಯೆ

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮತ್ತು ಹೊರ ರಾಜ್ಯದ ಜಿಲ್ಲೆಗಳಲ್ಲಿ ಸುಮಾರು 35 ಕ್ಕೂ ಅಧಿಕ ಸರಣೆ ಕಳ್ಳತನ ಹಾಗೂ ನ್ಯಾಯಾಲಯಗಳಿಗೆ ಹಾಜರಾಗದ 22 ಬಂಧನದ ವಾರಂಟ್ ಇದ್ದರೂ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬೆಳ್ತಂಗಡಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಅಜರಮಾರು ನಿವಾಸಿ ಹೈಡೋಸ್ ಮಗನಾದ ಕುಖ್ಯಾತ ಸರಣೆ ಕಳ್ಳ ಹಮೀದ್ ಕುಂಞಮೋನು@ ಜಾಫರ್ @ ಹಮೀದ್ @ ಲಾಡಿ ಹಮೀದ್(49) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಮಾಲತೇಶ್ ಅವರ ಸಹಕಾರದೊಂದಿಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಮತ್ತು ಸುದರ್ಶನ್ ಪವರ್ ಅವರು ಮಾ.2 ರಂದು ಬೆಳಗ್ಗೆ 12 ಗಂಟೆಗೆ ಸುಮಾರಿಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.ನ್ಯಾಯಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಳ್ಳನ ಇತಿಹಾಸ ಆರೋಪಿ ವಿರುದ್ಧ ಒಟ್ಟು ರಾಜ್ಯ ಹಾಗೂ ಹೊರ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 35 ಸರಣೆ ಕಳ್ಳತನ ಪ್ರಕರಣ ದಾಖಲಾಗಿದ್ದು. ಇದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 22 ಕಡೆಗಳಲ್ಲಿ ಬಂಧನದ ವಾರಂಟ್ ಹೊರಡಿಸಲಾಗಿತ್ತು. ಈತನ ಮೇಲೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 5 ಪ್ರಕರಣ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 4 ಪ್ರಕರಣ, ಶೃಂಗೇರಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಬೇಲೂರು ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಹರಿಹರಪುರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕೊಡಗು ಜಿಲ್ಲೆಯ ಬಾಗಮಂಡಲ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ, ಕಾಸರಗೋಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.

Related posts

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya
error: Content is protected !!