37.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಮಸ್ಯೆ

ಮೂಡುಕೋಡಿ: ಮನೆಯಂಗಳದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಕಾಳಿಂಗ ಸರ್ಪ

ವೇಣೂರು: ಮೂಡುಕೋಡಿ ಗ್ರಾಮದ ಬೊಮ್ಮನಟ್ಟ ವಿಶ್ವನಾಥ ಪೂಜಾರಿ ಅವರ ಮನೆಯ ಅಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.

ಮನೆ ಮಂದಿಯನ್ನು ಕ೦ಡ ಸರ್ಪ ಗದ್ದೆಯ ಪಕ್ಕದ ಗುಹೆಯಲ್ಲಿ ಅವಿತುಕೊಂಡದನ್ನು ಗಮನಿಸಿದ ಸ್ಥಳಿಯ ನಿವಾಸಿ ಸ೦ದೇಶ್ ಪಿ.ಎನ್. ಸ್ಥಳಿಯ ಗ್ರಾ.ಪಂ. ಸದಸ್ಯ ಅನೂಪ್ ಜೆ. ಪಾಯಸ್ ಅವರಿಗೆ ಮಾಹಿತಿ ನೀಡಿದ್ದಾರೆ.
ಅನೂಪ್ ಅವರು ವೇಣೂರು ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣ ಇಲಾಖೆಯ ಸಿಬ್ಬಂದಿ ಜೊತೆ ಸ್ಥಳಕ್ಕೆ ಆಗಮಿಸಿದರು. ಕಾಳಿಂಗ ಸರ್ಪ ಎ೦ದು ಖಚಿತಗೊಂಡು ವೇಣೂರು ಉಪವಲಯ ಅರಣ್ಯಾಧಿಕಾರಿ ಸುನಿಲ್ ಕುಮಾರ್ ಮಾರ್ಗದರ್ಶನದ೦ತೆ ಕೋಬ್ರಾ ಹಿಡಿಯಲು ಕಾವಳಕಟ್ಟೆಯ ಸ್ನೇಕ್ ಪ್ರಸಾದ್ ಅವರನ್ನು ಕರೆಸಿಕೊ೦ಡು ಕಾಳಿ೦ಗನನ್ನು ಸೆರೆ ಹಿಡಿದು ರಕ್ಷಿಸಲಾಯಿತು. ಅಪಾಯಕಾರಿ ಕೋಬ್ರಾನನ್ನು ಕೆಲವೇ ಘಂಟೆಗಳಲ್ಲಿ ಸೆರೆ ಹಿಡಿಯಲು ತುರ್ತಾಗಿ ಸಹಕರಿಸಿದ ಸದಸ್ಯ ಅನೂಪ್ ಜೆ. ಪಾಯಸ್ ರವರ ಕಾಳಜಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅರಣ್ಯ ಇಲಾಖಾ ಸಿಬ್ಬ೦ದಿ ರೋನಾಲ್ಡ್ ಡಿಸೋಜ ಸೇರಿ ಹಲವರು ಸಹಕರಿಸಿದರು.

Related posts

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

Suddi Udaya
error: Content is protected !!