July 23, 2026
ಸಮಸ್ಯೆ

ಮೂಡುಕೋಡಿ: ಮನೆಯಂಗಳದಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಕಾಳಿಂಗ ಸರ್ಪ

ವೇಣೂರು: ಮೂಡುಕೋಡಿ ಗ್ರಾಮದ ಬೊಮ್ಮನಟ್ಟ ವಿಶ್ವನಾಥ ಪೂಜಾರಿ ಅವರ ಮನೆಯ ಅಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ.

ಮನೆ ಮಂದಿಯನ್ನು ಕ೦ಡ ಸರ್ಪ ಗದ್ದೆಯ ಪಕ್ಕದ ಗುಹೆಯಲ್ಲಿ ಅವಿತುಕೊಂಡದನ್ನು ಗಮನಿಸಿದ ಸ್ಥಳಿಯ ನಿವಾಸಿ ಸ೦ದೇಶ್ ಪಿ.ಎನ್. ಸ್ಥಳಿಯ ಗ್ರಾ.ಪಂ. ಸದಸ್ಯ ಅನೂಪ್ ಜೆ. ಪಾಯಸ್ ಅವರಿಗೆ ಮಾಹಿತಿ ನೀಡಿದ್ದಾರೆ.
ಅನೂಪ್ ಅವರು ವೇಣೂರು ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣ ಇಲಾಖೆಯ ಸಿಬ್ಬಂದಿ ಜೊತೆ ಸ್ಥಳಕ್ಕೆ ಆಗಮಿಸಿದರು. ಕಾಳಿಂಗ ಸರ್ಪ ಎ೦ದು ಖಚಿತಗೊಂಡು ವೇಣೂರು ಉಪವಲಯ ಅರಣ್ಯಾಧಿಕಾರಿ ಸುನಿಲ್ ಕುಮಾರ್ ಮಾರ್ಗದರ್ಶನದ೦ತೆ ಕೋಬ್ರಾ ಹಿಡಿಯಲು ಕಾವಳಕಟ್ಟೆಯ ಸ್ನೇಕ್ ಪ್ರಸಾದ್ ಅವರನ್ನು ಕರೆಸಿಕೊ೦ಡು ಕಾಳಿ೦ಗನನ್ನು ಸೆರೆ ಹಿಡಿದು ರಕ್ಷಿಸಲಾಯಿತು. ಅಪಾಯಕಾರಿ ಕೋಬ್ರಾನನ್ನು ಕೆಲವೇ ಘಂಟೆಗಳಲ್ಲಿ ಸೆರೆ ಹಿಡಿಯಲು ತುರ್ತಾಗಿ ಸಹಕರಿಸಿದ ಸದಸ್ಯ ಅನೂಪ್ ಜೆ. ಪಾಯಸ್ ರವರ ಕಾಳಜಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅರಣ್ಯ ಇಲಾಖಾ ಸಿಬ್ಬ೦ದಿ ರೋನಾಲ್ಡ್ ಡಿಸೋಜ ಸೇರಿ ಹಲವರು ಸಹಕರಿಸಿದರು.

Related posts

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya

ಕಕ್ಕಿಂಜೆ: ಮನ್ನಡ್ಕಪಾದೆಯಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya
error: Content is protected !!