25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

ಉಜಿರೆ: ಇತಿಹಾಸ ಪ್ರಸಿದ್ದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕರು,ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ,ವಿಜಯ ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಕೆ. ಮೋಹನ್ ಕುಮಾರ್ ರವರ ವಿಭಿನ್ನ ಕಲ್ಪನೆಯೊಂದಿಗೆ ನಿರ್ಮಾಣಗೊಂಡು, ವಿಶೇಷ ಆಕರ್ಷಣೆಯೊಂದಿಗೆ ಜನರ ಮನಸೂರೆಗೊಳ್ಳುತ್ತಿರುವ “ಸುಪ್ರಸಾದ” ಭೋಜನ ಶಾಲೆಯಲ್ಲಿ ಅನ್ನದಾನ ಸೇವೆ ಮಾಡಲಿಚ್ಚಿಸುವ ಭಕ್ತಾಧಿಗಳಿಗೆ “ಮುಷ್ಠಿ ಅಕ್ಕಿ” ಎಂಬ ವಿಶೇಷ ಸೇವೆ ನಡೆಯುತ್ತಿದೆ.

ಭಾರತೀಯ ಪರಂಪರೆಯಲ್ಲಿ ಧರ್ನಕಾರ್ಯಗಳಿಗೆ ವಿಶೇಷ ಸ್ಥಾನಮಾನವಿದೆ‌. ಬ್ರಹ್ಮಕಲಶೋತ್ಸವದ ಸುಪ್ರಸಾದ ಭೋಜನ ಶಾಲೆಯ ಶ್ರೀ ಅನ್ನ ಪೂರ್ಣೇಶ್ವರಿಯ ಗುಡಿಯ ಸನ್ನಿಧಿಯಲ್ಲಿ ಈ ವಿಶೇಷ ಸೇವೆ ನಡೆಯುತ್ತಿದ್ದು ,ಅನ್ನದಾನ ಸೇವೆ ಮಾಡಲು ಇಚ್ಚಿಸುವವರು ಈ ಸೇವೆಯಲ್ಲಿ ಕೈ ಜೋಡಿಸಬಹುದಾಗಿದೆ.

ಈಗಾಗಲೇ ಕ್ಷೇತ್ರಕ್ಕೆ ಆಗಮಿಸುವ ಸ್ವಾಮೀಜಿಯವರು,ಗಣ್ಯರು,ಭಕ್ತರು ಸುಪ್ರಸಾದ ಭೋಜನಾಲಯದ ಅನ್ನಪೂರ್ಣೆಶ್ವರಿ ಗುಡಿಯಲ್ಲಿ ಕಲಶಗೆ ಅಕ್ಕಿ ಸಮರ್ಪಿಸುತ್ತಿದ್ದಾರೆ.ಪ್ರತಿನಿತ್ಯ ಸಾವಿರಾರು ಪ್ರಮಾಣದಲ್ಲಿ ಭಕ್ತರು ಶ್ರೀ ಜನಾರ್ದನ ಸ್ವಾಮಿ ದೇವಸ್ತಾನದ ಬ್ರಹ್ಮಕಲಶೋತ್ಸವಕ್ಕೆ ಆಗಮಿಸುತ್ತಿದ್ದು ಸುಪ್ರಸಾದ ಭೋಜನಾಲಯದಲ್ಲಿ ಅನ್ನ ಪ್ರಸಾದ ಸ್ವೀಕರಿಸುತ್ತಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಶ್ರುತಿ 2k26’ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!