25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕಪ್ರಮುಖ ಸುದ್ದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬ್ರಹ್ಮರಥ, ಪುಷ್ಪರಥ ಆಗಮನ – ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದ ಸಾವಿರಾರು ಭಕ್ತಗಣ

ಉಜಿರೆ: ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಮಾ.8ರಂದು ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥ ಹಾಗೂ ಪುಷ್ಪರಥವನ್ನು ನಿನ್ನೆ (ಮಾ.5)ಸಂಜೆ ದೇಗುಲಕ್ಕೆ ತರಲಾಯಿತು.

ಪ್ರಸ್ತುತ ಅಮೆರಿಕದ ಶ್ರೀ ವೆಂಕಟಕೃಷ್ಣ ಮಂದಿರದ ಅರ್ಚಕ, ಉಜಿರೆ ನಿವಾಸಿ ವೇದಮೂರ್ತಿ ಕಿರಣ್ ರಾವ್ ಮತ್ತು ಮನೆಯವರು ಸಮರ್ಪಣೆ ಮಾಡಲಿರುವ ಬ್ರಹ್ಮರಥವನ್ನು ಕೋಟೇಶ್ವರದ ಕುಂಭಾಶಿಯಲ್ಲಿ ನಿರ್ಮಿಸಲಾಗಿದ್ದು, ಅಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಟ್ರಕ್ ಮೂಲಕ ದೇಗುಲದ ವಠಾರಕ್ಕೆ ತರಲಾಯಿತು.

ಉಜಿರೆ ಬೆನಕ ಕನ್‌ಸ್ಟ್ರಕ್ಷನ್ ಮಾಲೀಕ ಗಣೇಶ್ ಗೌಡ ಮತ್ತು ಮನೆಯವರು ಸಮರ್ಪಿಸಲಿರುವ ಪುಷ್ಪರಥವನ್ನು ಕಾರ್ಕಳದಿಂದ ತರಲಾಯಿತು. ಬ್ರಹ್ಮರಥ ಮಡಂತ್ಯಾರು ಮೂಲಕ ಹಾಗೂ ಪುಷ್ಪರಥ ಅಳದಂಗಡಿ ಮೂಲಕ ಆಗಮಿಸಿ, ಗುರುವಾಯನಕೆರೆಯ ನವಶಕ್ತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಎರಡೂ ರಥಗಳನ್ನು ಅಲ್ಲಿಂದ ಒಟ್ಟಾಗಿ ತರಲಾಯಿತು.

ಉಜಿರೆಯ ಜನಾರ್ದನ ಶಾಲೆಯಿಂದ ರಥಗಳನ್ನು, ಕೀಲುಕುದುರೆ, ಸುಡುಮದ್ದು, ಕುಣಿತ ಭಜನೆ, ಮೆರವಣಿಗೆ ಮೂಲಕ ಶ್ರೀ ಜನಾರ್ದನನ ನಾಮಸ್ಮರಣೆಯೊಂದಿಗೆ ಸ್ವಾಗತಿಸಿ ದೇವಸ್ಥಾನದ ವಠಾರಕ್ಕೆ ತರಲಾಯಿತು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ರಾಜೇಶ್ ಶೆಟ್ಟಿ ನವಶಕ್ತಿ, ಕಿರಣ್ ರಾವ್ ಮತ್ತು ಕುಟುಂಬಸ್ಥರು, ಗಣೇಶ್ ಗೌಡ ಮತ್ತು ಕುಟುಂಬಸ್ಥರು, ನಾರಾಯಣ ಗೌಡ ಕೊಳಂಬೆ, ಉಮೇಶ್ ಶೆಟ್ಟಿ, ರವಿ ಚಕ್ಕಿತ್ತಾಯ, ರಘುರಾಮ ಶೆಟ್ಟಿ, ವಸಂತ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ರಾಜೇಶ್ ಪೈ, ರವಿ ಕುಮಾರ್ ಬರಮೇಲು, ಹುಕುಂ ರಾಮ್ ಪಟೇಲ್, ಬೆಂಗಳೂರು ಸಮಿತಿ ಅಧ್ಯಕ್ಷ ಮಂಜುನಾಥ್ ಕನ್ಯಾಡಿ, ಸೇರಿದಂತೆ ನಾನಾ ಸಮಿತಿಗಳ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!