September 6, 2026
ಧಾರ್ಮಿಕವರದಿ

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ; ಗೋಂದೋಳು ಪೂಜೆ, ದೇವಿ ದರ್ಶನ

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಶುಭಾಶ್ರೀರ್ವಾದಗಳೊಂದಿಗೆ ಎಡಪದವು ಶ್ರೀ ಗಣೇಶ ತಂತ್ರಿ ಅವರ ನೇತೃತ್ವದಲ್ಲಿ ಹಾಗೂ ಶ್ರೀ ಮಂಜುನಾಸ ಭಟ್ ಅಂತರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ. ೪ರಂದು ಸಂಪನ್ನ ಗೊಂಡಿತು.

ಮಾ.೪ರಿAದ ಮೊದಲುಗೊಂಡು ಮಾ.೬ ವರೆಗೆ ಸಂಭ್ರಮದಿAದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ ನಡೆಯಿತು.ಮಾ.೬ ರಂದು ಕರಾಯ ಶ್ರೀ ದೇವಿ ಕೃಪಾ ಮೆಲೋಡೀಸ್ ಇವರಿಂದ ಭಕಿ ರಸಮಂಜರಿ ಹಾಗೂ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮಾಡಿರುವ ಶಮಿಕ ಎಂ. ಕೆ. ಚಿವರಿಂದ ಗಾಂಧಾರಿ ವಿದ್ಯೆಯಲ್ಲಿ ಸ್ಯಾಂಡ್ ಆರ್ಟ್ ಪ್ರದರ್ಶನ ಗೊಂಡಿತು.

ಸಂಜೆ ಗೋಂದೋಳು ಪೂಜೆಯ ವಿಧಿ-ವಿಧಾನ ಪ್ರಾರಂಭ, ಗುಮ್ಮಟೆ ಹಾಡು, ರಾತ್ರಿ ಗೋಂದೋಳು ಪೂಜೆ, ದೇವಿ ದರ್ಶನ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು.ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷ ಚೆನ್ನಕೇಶವ ಅರಸಮಜಲ್, ರಾಘವ ನಾಯ್ಕ ಶ್ರೀ ಜಲದುರ್ಗಾ, ಪ್ರಧಾನ ಕಾರ್ಯದರ್ಶಿ ಚಿದಾನಂದ ನಾಯ್ಕ ಕುಪೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಪ್ರದೀಪ ನಾಯ್ಕ ಆನಡ್ಕ ಹಾಗೂ ಕೃಷ್ಣಪ್ಪ ನಾಯ್ಕ, ಕೋಶಾಧಿಕಾರಿ ಪುಷ್ಪಾನಂದ ನಾಯ್ಕ ಗಜಂತೋಡಿ, ಉರುವಾಲು ಮಹಮ್ಮಾಯಿ ಸೇವಾ ಟ್ರಸ್ಟ್ ಅಧ್ಯಕ್ಷ ವಿನೋದ್ ನಾಯ್ಕ ಶ್ರೀ ಜಲದುರ್ಗಾ, ಉಪಾಧ್ಯಕ್ಷ ಚಿದಾನಂದ ನಾಯ್ಕ ಮತ್ರಕುಮೇರು, ಕಾರ್ಯದರ್ಶಿ ಉಮೇಶ್ ನಾಯ್ಕ ಎಂಜಿರಪಲ್ಕೆ, ಉರುವಾಲು ಮಹಮ್ಮಾಯಿ ಮಾರಟಿ ಸಮಾಜ ಸೇವಾ ಸಂಘ ಅಧ್ಯಕ್ಷ ಸೀತಾರಾಮ ನಾಯ್ಕ, ಕೋಶಾಧಿಕಾರಿ ಹರೀಶ್ ನಾಯ್ಕ್ ಕುಪ್ಪೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಹೆಚ್.ಎಲ್, ಉಪಾಧ್ಯಕ್ಷ ಶೇಖರ್ ನಾಯ್ಕ ಹಲೇಜಿ, ಕಾರ್ಯದರ್ಶಿ ಕಿಶನ್ ನಾಯ್ಕ ಮಜ್ಜೆ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಆನಡ್ಕ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ ಸಂಪನ್ನ

Suddi Udaya

ರಸಪ್ರಶ್ನೆ ಸ್ಪರ್ಧೆ: ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್

Suddi Udaya
error: Content is protected !!