25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

ಚಾರ್ಮಾಡಿ: ಕಕ್ಕಿಂಜೆ-ಬೇಂದ್ರಾಳಕ್ಕೆ ಹೋಗುವ ರಸ್ತೆಯ ಮಧ್ಯೆ ರೆಜಿನ ನರ್ಸರಿ ಬಳಿ ಒಣಗಿರುವ ಅಕೇಶಿಯಾದ ಮರಗಳು ಅಪಾಯದ ಸ್ಥಿತಿಯಲ್ಲಿದ್ದು ಇದರ ತೆರವಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಮರಗಳು ಯಾವುದೇ ಸಂದರ್ಭದಲ್ಲೂ ರಸ್ತೆಗೆ ಬೀಳುವ ಸಂಭವವಿದ್ದು, ಮಾ.5ರಂದು ಇದೆ ರಸ್ತೆಯಲ್ಲಿ ವಾಹನವೊಂದು ಸಂಚರಿಸುವಾಗ ಒಣಗಿರುವ ಮರದ ಕೊಂಬೆ ವಾಹನದ ಮೇಲೆ ಬಿದ್ದಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾನೆ.

ಈ ಬಗ್ಗೆ ಸ್ಥಳೀಯರೊಬ್ಬರು ವಲಯ ಅರಣ್ಯ ಅಧಿಕಾರಿಗೆ ತಿಳಿಸಿದ್ದು, ಅವರು ಅರಣ್ಯ ಇಲಾಖೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ, ಪರಿಶೀಲಿಸಿ ಮೆಸ್ಕಾಂ ಇಲಾಖೆ ವಿದ್ಯುತ್ ತಂತಿಗಳನ್ನು ತೆರವು ಮಾಡಿ ಕೊಡಬೇಕು ಎಂದು ತಿಳಿಸಿದ್ದರು. ಆದರೆ ಮೆಸ್ಕಾಂ ಇಲಾಖೆ ಮೀನಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರಾದ ನಝೀರ್ ಆರೋಪಿಸಿದ್ದಾರೆ.

Related posts

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ಕುಸಿಯುವ ಭೀತಿ:ಶೀಘ್ರ ದುರಸ್ತಿಗೆ ಆಗ್ರಹಿಸಿ”ಕನ್ನಡಸೇನೆ-ಕರ್ನಾಟಕ” ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ

Suddi Udaya
error: Content is protected !!