July 23, 2026
ಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಸುವರ್ಣ ಗರಿ ಜಿಲ್ಲಾ ಪ್ರಶಸ್ತಿ ಪರೀಕ್ಷೆಯಲ್ಲಿ ಬುಲ್ ಬುಲ್ ವಿದ್ಯಾರ್ಥಿಗಳಾದ ನಿಯತಿ ಭಟ್, ರಿಜ್ಮಾ ಆಯಿಷ್ಯ, ಮಹತಿ ಎನ್ .ಕೆ., ಐಷಾನಿ, ಸ್ಪೂರ್ತಿ ಎಸ್., ಲಿಷಾ ಪ್ರಸಾದ್ ರೈ , ಅನಿಕಾ ಕಾಮತ್, ಅರ್ಗ್ಯ ಪಿ. ಜೈನ್, ದ್ರುವಿ ಎಸ್. ರೈ ತೆರ್ಗಡೆಗೊಂಡಿರುತ್ತಾರೆ.

ಇವರು ಜಿಲ್ಲಾಧಿಕಾರಿ ಯವರ ನಿವಾಸದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ. ಇವರಿಂದ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಇವರಿಗೆ ಮುಖ್ಯ ಶಿಕ್ಷಕಿ ಯವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯ ಕಾರ್ಯದರ್ಶಿ , ಶ್ರೀ ಧ.ಮಂ ಆ.ಮಾ ಶಾಲೆ ಯ ಶಿಕ್ಷಕಿ ಪ್ರಮೀಳಾ ಪೂಜಾರಿ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!