23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಯುವಕರು, ಕೃಷಿಕರು, ರೈತರು, ದುಡಿವ ವರ್ಗಕ್ಕೆ ಶಕ್ತಿ ತುಂಬಿದ ರಾಜ್ಯ ಬಜೆಟ್: ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ: ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ದಾಖಲೆಯ ಆಯವ್ಯಯ ಮಂಡಿಸಿರುವ ಸಿದ್ದರಾಮಯ್ಯ ಅವರು ರೈತರು, ಕೃಷಿಕರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ಆದ್ಯತೆ ನೀಡುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಜನಪರ ಬಜೆಟ್ ಮಂಡಿಸಿದ್ದಾರೆ. ಅದರಲ್ಲೂ ನಿರುದ್ಯೋಗ ಎದುರಿಸುತ್ತಿದ್ದ ಯುವಜನತೆಗೆ 56,432 ಸರಕಾರಿ ಹುದ್ದೆ ಭರ್ತಿ ಮಾಡುವ ಬಗ್ಗೆ ಸಿಎಂ ಘೋಷಣೆ ಮಾಡಿದ್ದು, ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡುವ ಮೂಲಕ ಹಿಂದಿನ ಯಾವುದೇ ಸರ್ಕಾರಗಳು ಮಾಡದ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಎಲ್ಲಾ ಜಿಲ್ಲೆಗಳು, ವರ್ಗಗಳಿಗೂ ಸಮಾನ ಪ್ರಾಮುಖ್ಯತೆ ನೀಡಿ ಅಭಿವೃದ್ಧಿಯೊಂದೇ ತಮ್ಮ ಗುರಿ ಎಂಬುದನ್ನು ನಿರೂಪಿಸಿದ್ದಾರೆ.

ಉದ್ಯೋಗಸ್ಥ ಎಸ್.ಸಿ-ಎಸ್.ಟಿ ಮಹಿಳೆಯರಿಗೆ ಮಂಗಳೂರು, ಮೈಸೂರು, ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುವುದಾಗಿ ತಿಳಿಸಿರುವುದು ಮುಂದಿನ ದಿನಗಳಲ್ಲಿ ತುಂಬಾ ಅನುಕೂಲವಾಗಲಿದೆ. ಅದೇ ರೀತಿ ಆರ್‌ಟಿಇ ಅಡಿ ಪ್ರವೇಶ ಪಡೆದ ಎಸ್‌ಸಿ, ಎಸ್‌ಟಿ 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು 19 ಕೋಟಿ ರೂ. ಘೋಷಣೆ ಮಾಡಲಾಗಿದೆ. ಎಸ್‌ಟಿ ಸಮುದಾಯದ ನಿರುದ್ಯೋಗಿಗಳಿಗೆ ಉದ್ಯಮಶೀಲತಾ ಯೋಜನೆಯಡಿ ನಾಲ್ಕು ಲಕ್ಷ ರೂ. ಸಹಾಯಧನ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ರೂ. ಕೃಷಿ ಸಾಲ, ಹಸು, ಎಮ್ಮೆ ಖರೀದಿಸಲು 40 ಸಾವಿರ ರೂ. ಪ್ರೋತ್ಸಾಹಧನ, ರೈತರ ಆದಾಯ ವೃದ್ಧಿಗೆ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಯಡಿ ಮುಂದಿನ ಮೂರು ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಕೃಷಿ ಮತ್ತು ತೋಟಗಾರಿಕೆಗೆ 8,373 ಕೋಟಿ ರೂ. ಹಾಗೂ ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ 4,084 ಕೋಟಿ ರೂ. ಮೀಸಲಿಟ್ಟಿರುವುದು ರೈತಪರ ಬಜೆಟ್ ಎಂಬುವುದನ್ನು ನಿರೂಪಿಸುತ್ತದೆ ಎಂದು ದ. ಕ ಜಿಲ್ಲಾ ಕೆ ಡಿ ಪಿ ಯ ಸರಕಾರದ ನಾಮ ನಿರ್ದೇಶಿತ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲಾ ಹೇಳಿಕೆ ನೀಡಿರುತ್ತಾರೆ

Related posts

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!