September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಪಶ್ಚಿಮ ಬಂಗಾಳದ ದಾಖಲೆಗಳಿಲ್ಲದ ಬೈಕ್ ಅನ್ನು ಖರೀದಿಸಿ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಚಲಾಯಿಸುತ್ತಿದ್ದ ಬೈಕ್ ಹಾಗೂ ಸವಾರನನ್ನು ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪತ್ತೆಹಚ್ಚಿದ್ದು, ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿ ಶೇಕುಂಞ ಮಗನಾದ ನವಾಜ್ (19) ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಅನ್ನು ಮಾ.5 ರಂದು ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿ ಬೆಳ್ತಂಗಡಿ ಸಂಚಾರಿ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ ಮತ್ತು ಸಿಬ್ಬಂದಿ ಶಿವಾನಂದ ಎಂಬವರು ತಡೆದು ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದಾಗ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೈಕ್ ಅನ್ನು ಉಪಯೋಗಿಸುತ್ತಿರುವುದು ಬಹಿರಂಗಗೊಂಡಿದೆ.

ಹೆಲ್ಮೆಟ್ ಧರಿಸದೆ ಗುರುವಾಯನಕೆರೆ ಕಡೆಯಿಂದ ಬಂದ CRT9988 ನಂಬರ್ RX 100 ಬೈಕ್ ನಲ್ಲಿ ಬಂದ ಯುವಕನನ್ನು ಪರಿಶೀಲಿಸಿದಾಗ ಬೈಕ್ ನಂಬರ್ ಹಾಗೂ ಆತ ನೀಡಿರುವ ದಾಖಲೆಗಳು ಹೊಂದಾಣಿಕೆಯಾಗದೆ ಇದ್ದು ಚಾಸಿಸ್ ನಂಬರ್ ಮತ್ತು ಇಂಜಿನ್ ನಂಬರ್ ಪರಿಶೀಲಿಸಿದಾಗ ಅದು ಹಾಗೂ ಆರ್.ಸಿ ಬುಕ್ ನಲ್ಲಿರುವ ದಾಖಲೆಗಳು ಸರಿಯಾಗಿಲ್ಲದಿರುವುದು ಕಂಡು ಬಂದಿದೆ.

ಈ ಬಗ್ಗೆ ಹೆಚ್ಚಿನ ವಿಚಾರಿಸಿದಾಗ ಬೈಕ್ ಸವಾರನ ಬೈಕ್ ಪಶ್ಚಿಮ ಬಂಗಾಳ ರಾಜ್ಯದ್ದಾಗಿದ್ದು ನಿಜವಾದ ನೋಂದಣಿ ಸಂಖ್ಯೆ WB 26 B2463 ಆಗಿರುತ್ತದೆ. ಬೈಕ್ ನ ಎಫ್.ಸಿ ಮುಗಿದಿರುವ ಕಾರಣ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಅದರಂತೆ ಫೇಸ್ ಬುಕ್ ನಲ್ಲಿ ಬಂದ ಜಾಹೀರಾತನ್ನು ನೋಡಿ ಅದಕ್ಕೆ ಆನ್ ಲೈನ್ ನಲ್ಲಿ ಹಣವನ್ನು ಪಾವತಿಸಿ CRT9988 ನೋದಣಿ ನಂಬರ್ ಹಾಗೂ ದಾಖಲೆಗಳನ್ನು ಖರೀದಿಸಿರುವುದಾಗಿಯೂ ಅದನ್ನು ಈ ಬೈಕ್ ಗೆ ಅಳವಡಿಸಿರುವುದಾಗಿಯೂ ತಿಳಿಸಿದ್ದಾನೆ.

ಈ ಹಿನ್ನಲೆಯಲ್ಲಿ ಯುವಕನ್ನು ಹಾಗೂ ಬೈಕ್ ಅನ್ನು ಬೆಳ್ತಂಗಡಿ ಸಂಚಾರಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದ ಬೈಕ್ ಹೇಗೆ ಇಲ್ಲಿ ಬಂದಿದೆ ಹಾಗೂ ನಕಲಿ ನಂಬರ್ ಪ್ಲೇಟ್ ಹಾಗೂ ದಾಖಲೆ ತಯಾರಿಸುವ ವ್ಯಕ್ತಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya
error: Content is protected !!