September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎರ್ಮಾಲ್ ಪಲ್ಕೆ ಎಂಬಲ್ಲಿ ಕಳೆದ ಹಲವಾರು ದಿನಗಳಿಂದ ಏರ್ಟೆಲ್ ನೆಟ್ವರ್ಕ್ ಇಲ್ಲದೆ ವ್ಯವಹಾರ, ಫೋನ್ ಕರೆಗಳಿಗಾಗಿ ಜನ ಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈಗಿನ ಕಾಲದಲ್ಲಿ ಮೊಬೈಲ್ ಇಲ್ಲದಿದ್ದರೆ ಯಾವ ಕೆಲಸವು ನಡೆಯುವುದಿಲ್ಲ. ವರ್ಕ್ ಫ್ರಮ್ ಹೋಮ್ ನ ಎಷ್ಟೋ ಉದ್ಯೋಗಿ ಗಳಿದ್ದಾರೆ. ಆದರೆ ಟವರ್ ಸರಿ ಇಲ್ಲದ ಕಾರಣ ಸಿಗ್ನಲ್ ಸಿಗುವ ಪ್ರದೇಶವನ್ನು ಹುಡುಕುವಂತ ಪ್ರಮೇಯ ಬಂದಿದೆ.

ಈ ಪ್ರದೇಶದ ಜನರು ಹೆಚ್ಚಾಗಿ ಏರ್ಟೆಲ್ ಕಂಪನಿಯ ಸಿಮ್ ಕಾರ್ಡ್ ಗಳನ್ನು ಬಳಕೆ ಮಾಡುತ್ತಿದ್ದು, ಪ್ರಸ್ತುತ ಸಂದರ್ಭದಲ್ಲಿ ಯಾವಾಗ ನೋಡಿದರೂ ನೆಟವರ್ಕ್ ಇಲ್ಲದೆ ಇರುವುದರಿಂದ ಎರ್ಮಾಲ್ ಪಲ್ಕೆಯ ಜನತೆ ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವಾರು ದಾಖಲೆಗಳಿಗೆ ಏರ್ಟೆಲ್ ಸಿಮ್ ಕಾರ್ಡ್ ನ ನಂಬರ್ ನೀಡಿದ್ದು ಇದೀಗ ಓಟಿಪಿಗೂ ಕಷ್ಟ ಪಡುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya
error: Content is protected !!