ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಸರಕಾರಿ ಪ್ರೌಢಶಾಲೆ, ಬದನಾಜೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹದ ಅಂಗವಾಗಿ ಮಾ.6ರಂದು ವಿದ್ಯುತ್ ಬಳಕೆಯ ಸುರಕ್ಷತಾ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ವಿದ್ಯುತ್ ಅವಘಡಗಳು ಮತ್ತು ಸುರಕ್ಷಾ ವಿಧಾನಗಳು ಕುರಿತು ಜಾಗೃತಿ ಮೂಡಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ರಸ್ತೆ ಸುರಕ್ಷತಾ ಸುರಕ್ಷತಾ ಜಾಗೃತಿ ನೀಡಿದರು. ಶಾಲಾ ಶಿಕ್ಷಕ ರಾಮಕೃಷ್ಣ ಭಟ್ ಸ್ವಾಗತಿಸಿ, ಮುಖ್ಯಶಿಕ್ಷಕಿ ಜಮುನಾ ವಂದಿಸಿದರು. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ರಾಘವೇಂದ್ರ ಭಟ್ ಮತ್ತು ರೋಹಿತ್ ಕಾರ್ಯಕ್ರಮ ಸಂಯೋಜಿಸಿದರು.











