ಬೆಳ್ತಂಗಡಿ: ತಾಲೂಕು ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ ಮಾ.7ರಂದು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನೂತನ ತಂತ್ರಜ್ಞಾನದ ಆಧಾರದ ಮೇಲೆ ಅರ್ಹ ಅರ್ಜಿದಾರರ ಕಡತಗಳನ್ನು ಪರಿಶೀಲಿಸಿ ವಿಲೇವಾರಿಗೊಳಿಸಲಾಯಿತು.ಇದೇ ಸಂದರ್ಭದಲ್ಲಿ ಸಮಿತಿಯ ಮೂಲಕ ಅರ್ಹರಾದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ, ಅವರ ಹಲವು ವರ್ಷಗಳ ನಿರೀಕ್ಷೆಗೆ ನ್ಯಾಯ ಒದಗಿಸಲಾಯಿತು.











