September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು, ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು. ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ – ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya
error: Content is protected !!