26.7 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು, ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು. ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಕುತ್ಲೂರು ಗುರುನಾರಾಯಣ ಸೇವಾ ಸಂಘ ದ ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya
error: Content is protected !!