24.4 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಶುಭ ವಿವಾಹಶುಭಾರಂಭ

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ, ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ಹಾಗೂ 42ನೇ ವರ್ಷದ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವು ಮಾ 8ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಧಾರ್ಮಿಕ ಪರಿಷತ್ ನ ರವಿಶಂಕರ ಶೆಟ್ಟಿ ಬಡಾಜೆಗುತ್ತು ನೇರವೇರಿಸಿ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಡೈಜಿ ವರ್ಲ್ಡ್ ನ ವಾಲ್ಟರ್ ನಂದಳಿಕೆ, ಉದ್ಯಮಿ ಹರೀಂದ್ರ ಟಿ.ಪೈ, ಮಾಲಾಡಿ ಗ್ರಾ.ಪಂ ಮಾಜಿ‌ ಅಧ್ಯಕ್ಷ ಪುನೀತ್ ಕುಮಾರ್, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಯು.ಎಸ್ ಚಂದ್ರಶೇಖರ ಭಟ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ:
ಪ್ರತಿ ವರ್ಷ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ನೀಡುತ್ತಿರುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಯನ್ನು ಧಾರ್ಮಿಕ ಕ್ಷೇತ್ರದಲ್ಲಿ ರವಿಶಂಕರ ಶೆಟ್ಟಿ ಬಡಾಜೆಗುತ್ತು,ಯಕ್ಷಗಾನ ಕ್ಷೇತ್ರ ದಿವಾಕರ ದಾಸ್, ಶಿಕ್ಷಣ ಕ್ಷೇತ್ರದಲ್ಲಿ ಸಂತೋಷ್ ಎಸ್ ಸನಿಲ್, ಉದ್ಯಮ ಕ್ಷೇತ್ರದಲ್ಲಿ ಮೊಹಮ್ಮದ್ ರಫೀಕ್, ಸಮಾಜಸೇವೆ ಮತ್ತು ಸಂಘಟನೆಗೆ ಸುಧೀರ್ ಪೂಜಾರಿ ದ.ಕ ಗ್ಯಾರೇಜ್ ಮಾಲಕರ ಸಂಘ ಬಂಟ್ವಾಳ‌ ಇವರಿಗೆ ಪ್ರದಾನ ಮಾಡಲಾಯಿತು.

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ಸ್ವಾಗತಿಸಿದರು. ಗೌರವಾಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಅಧ್ಯಕ್ಷ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಪಿ. ಪೂಂಜಾಲಕಟ್ಟೆ ಹಾಗೂ ಸದಸ್ಯರು ಸಹಕರಿಸಿದರು.

Related posts

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya
error: Content is protected !!