July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ ರೋಟರಿ ಕ್ಲಬ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ(ರಿ), ಸ್ತ್ರೀ ಶಕ್ತಿ ಬ್ಲೋಕ್ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ಮಾ. 8 ರಂದು ರೋಟರೀ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಛಾಟಕರಾದ ರೋಟರಿ ಕ್ಲಬ್ ನ ಮಾಜಿ ಕಾರ್ಯದರ್ಶಿ ಶ್ರೀಮತಿ ರಕ್ಷಾ ರಾಘ್ನೇಶ್ ರವರು ಕಾರ್ಯಕ್ರಮವನ್ನು ಉದ್ಛಾಟಿಸಿ, ವಿಶ್ವ ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮುಖ್ಯಾಧಿಕಾರಿ ಶ್ರೀಮತಿ ಪ್ರಿಯಾ ಆ್ಯಗ್ನೆಸ್ ಅವರು ಮಹಿಳೆಯರಿಗೆ ದೊರೆಯುವ ಸೌಲಭ್ಯದ ಕುರಿತು ತಿಳಿಸಿದರು ಮಾತ್ರವಲ್ಲ ಮಹಿಳೆಯರ ಸುರಕ್ಷತೆಗೆ ಬೇಕಾದ ಅಗತ್ಯ ಮಾಹಿತಿಗಳನ್ನು ನೀಡಿದರು.

ಡಾ| ಎಂ ಎಂ ದಯಾಕರ್ ಮಾತನಾಡಿ, ಸಮಾಜದಲ್ಲಿ ಗಂಡು ಹಾಗೂ ಹೆಣ್ಣು ಇಬ್ಬರೂ ಸಮಾನ ಗೌರವಕ್ಕೆ ಪಾತ್ರರು. ಇಂತಹ ಕಾರ್ಯಕ್ರಮಕ್ಕೆ ಗಂಡಸರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ಅವಶ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಅಧ್ಯಕ್ಷ ಡಾ ಪ್ರಕಾಶ ಪ್ರಭು ಅವರು ಮಹಿಳೆಯರು ಇಂದು ಹೊರಗೆ ದುಡಿಯುತ್ತಿದ್ದರೂ , ಮನೆ, ಗಂಡ ಹಾಗೂ ಮಕ್ಕಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಮನೆ ಕೆಲಸದಲ್ಲಿ ಸಹಾಯ ಮಾಡುವುದು ಒಂದರ್ಥದಲ್ಲಿ ಗಂಡಂದಿರು ತಮ್ಮ ಪತ್ನಿಯಂದಿರಿಗೆ ಗೌರವ ಕೊಟ್ಟ ಹಾಗೆ ಎಂದರು.

ಆ್ಯನ್ ಡಾ ಅನಿತಾ ದಯಾಕರ್ ಮತ್ತು ಆ್ಯನ್ ಆಶಾ ಪಿದಮಲೆ ನಿರೂಪಿಸಿದರು. ಶ್ರೀಮತಿ ಸೌಮ್ಯ ಪ್ರಾರ್ಥಿಸಿದರು. ಶ್ರೀಮತಿ ನಿಶಾ ಯಶವಂತ ಧನ್ಯವಾದ ಸಮರ್ಪಿಸಿದರು.
ಸಭಾ ಕಾರ್ಯಕ್ರಮದ ನಂತರ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ರೊ. ರೇಷ್ಮಾ ಹೆಗ್ಡೆ ನಡೆಸಿಕೊಟ್ಟರು.

Related posts

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!