July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು,ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು.ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕ್ರಾಂತಿವೀರ ಉಬಾರ್ ಮಂಜ ಬೈದ್ಯರ ಸಂಸ್ಮರಣಾ ಸಮಿತಿ ರಚನೆ: ಮಂಜಯ್ಯ ಬೈದ್ಯ ರವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯ

Suddi Udaya

ಮಾಲಾಡಿ: ರೋನಾಲ್ಡ್ ಫೆರ್ನಾಂಡಿಸ್ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya
error: Content is protected !!