July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು, ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು. ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!