September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು, ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು. ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya
error: Content is protected !!