37.8 C
ಪುತ್ತೂರು, ಬೆಳ್ತಂಗಡಿ
March 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು,ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು.ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya
error: Content is protected !!