25.4 C
ಪುತ್ತೂರು, ಬೆಳ್ತಂಗಡಿ
September 11, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

ಬಂದಾರು: ಬಂದಾರು ಗ್ರಾಮ ಕುರಾಯ ನಿವಾಸಿ ಪದ್ಮುಂಜ ಸಿ ಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ (56.ಪ್ರಾಯ )ರವರು ಮಾ.8 ರಂದು ಉಪ್ಪಿನಂಗಡಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರತರನಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮoಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತರಾಗಿರುತ್ತಾರೆ.

ರಾತ್ರಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಮೃತರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.


ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಂಕಿತಾ ಕೆ, ನಿರ್ದೇಶಕರುಗಳು, ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಮಲೆಂಗಲ್ಲು ದೇವಸ್ಥಾನ ಆಡಳಿತ ಮೊಕ್ತೇಸರ ಚಿದಾನಂದ ರಾವ್ ಕೊಲ್ಲಾಜೆ, ಕಣಿಯೂರು ಗುತ್ತು ಸುದರ್ಶನ್ ಹೆಗ್ಡೆ, ರಾಜಶ್ರೀ ಎಸ್ ಹೆಗ್ಡೆ,ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷ ಸೀತಾರಾಮ್ ಮಡಿವಾಳ, ತಾಲೂಕು ಮಜ್ದೂರು ಸಂಘ ಅಧ್ಯಕ್ಷ, ವಕೀಲ ಉದಯ್ ಕುಮಾರ್ ಬಿ. ಕೆ, ಯುವ ವಕೀಲರಾದ ಯತೀಶ್ ಶೆಟ್ಟಿ ಪಣೆಕ್ಕರ, ಅಶೋಕ್ ಮೊಗ್ರ ಕಾನಿಸ್ಕ, ಉಮೇಶ್ ಗೌಡ ಅಂಗಡಿಮಜಲು, ಚಂದ್ರಹಾಸ ಗೌಡ ದೇವಸಗುತ್ತು ಮುಗೇರಡ್ಕ, ಬಾಲಕೃಷ್ಣ ಗೌಡ ಮುಗೇರಡ್ಕ, ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಪ್ರಮುಖರು, ಹಾಗೂ ನಾಗರಿಕರು ಬಂಧು ಮಿತ್ರರು, ಕುಟುಂಬಸ್ಥರು ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya
error: Content is protected !!