25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಸುವರ್ಣ ಸಂಭ್ರಮ 2026 ಚಾಲನೆಯೊಂದಿಗೆ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಮಾ.15ರಂದು ಅಳದಂಗಡಿ ಕಟ್ಟೂರು ಶಂಕರ್ ಭಟ್ ರವರ ತೋಟದಲ್ಲಿ ನಡೆಯಲಿರುವುದು ಎಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್‌ ಪೂಂಜ ನೆರವೇರಿಸಲಿದ್ದಾರೆ.ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಕುಶಾಲಪ್ಪ ಗೌಡ ಸುವರ್ಣ ಸಂಭ್ರಮದ ಲೋಗೊ ಅನಾವರಣಗೊಳಿಸಲಿದ್ದಾರೆ. ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್‌ ಕುಮಾರ್ ಕಾಫಿ ಗಿಡ ವಿತರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ. ರಘು, ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ., ಪ್ರಗತಿಪರ ಕೃಷಿಕ ಶಂಕರ ಭಟ್‌ ಕಟ್ಟೂರು ಭಾಗವಹಿಸಲಿದ್ದಾರೆ.

ಐ.ಸಿ.ಎ.ಆರ್ ನಿವೃತ್ತ ಹಿರಿಯ ವಿಜ್ಞಾನಿ ಡಾ. ವೇಣುಗೋಪಾಲ್ ಕಾಳುಮೆಣಸು ನಾಟಿ, ಪೋಷಣೆ, ರೋಗ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ದ.ಕ. ಜಿಲ್ಲಾ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರ ಅಜಿತ್‌ ಪ್ರಸಾದ್ ರೈ ಕಾಯರ್ತಡಿ ದ.ಕ. ಜಿಲ್ಲೆಯಲ್ಲಿ ಅಡಿಕೆಗೆ ಪರ್ಯಾಯ ಹಾಗೂ ಮಿಶ್ರ ಬೆಳೆಯಾಗಿ ಲಾಭಾದಾಯಕ ಕಾಫಿ ಕೃಷಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಗತಿಪರ ಕೃಷಿಕ ಅನಂತಕೃಷ್ಣ ಪಳ್ಳತ್ತಡ್ಕ ನೀರಾವರಿ, ಆಟೋಮೇಟಿಕ್ ಇರಿಗೇಷನ್ ಮತ್ತು ಫಟಿಗೇಷನ್ ಸಿಸ್ಟಂ ಬಗ್ಗೆ ತಿಳಿಸಲಿದ್ದಾರೆ ಎಂದರು.

Related posts

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya
error: Content is protected !!