July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

ಗುರುವಾಯನಕೆರೆ:ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ.
ಪಿಯುಸಿಯಲ್ಲಿ ವಿಜ್ಞಾನ ವಿಭಾಗ ಸೇರಿ ಮುಂದೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳನ್ನು ಮಾಡಬೇಕೆಂದು ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಫೌಂಡೇಶನ್ ಕೋರ್ಸ್ ನಡೆಸಲಿದೆ.

ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ನಾಟಾ ಎನ್ ಡಿ ಎ, ಬಿಎಸ್ಸಿ ಅಗ್ರಿ ,ಫಾರೆನ್ಸಿಕ್ ಸೈನ್ಸ್ ಸೇರಿ ವಿಜ್ಞಾನ ವಿಭಾಗದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾರ್ಚ್ 10 ರಿಂದ ಪ್ರತಿ ನಿತ್ಯ ಉಚಿತ ಫೌಂಡೇಶನ್ ತರಗತಿಗಳು ನಡೆಯಲಿವೆ. ಸಿಬಿಎಸ್ ಇ ಹಾಗೂ ಐಸಿಎಸ್ ಇ ತರಗತಿಗಳಿಗೆ ಈಗಾಗಲೇ ವಾರ್ಷಿಕ ಪರೀಕ್ಷೆ ಮುಗಿದಿರುವುದರಿಂದ ಮೊದಲ ಹಂತದಲ್ಲಿ ಸಿಬಿಎಸ್ ಇ ಹಾಗೂ ಐಸಿಎಸ್ ಈ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುತ್ತದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಸ್ಟೇಟ್ ಬೋರ್ಡ್ ಸಿಲೆಬಸ್ ನ ವಿದ್ಯಾರ್ಥಿಗಳಿಗೆ ಕೂಡಾ ಉಚಿತ ಎಕ್ಸೆಲ್ ಕನೆಕ್ಟ್ ತರಗತಿ ಗಳನ್ನು ನಡೆಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ವಿಶೇಷ ಜ್ಞಾನ ಹಾಗೂ ಪ್ರಾವೀಣ್ಯತೆಯಿರುವ, ಹಿರಿಯ ಪ್ರಾಧ್ಯಾಪಕರು ತರಗತಿ ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ.

ಪ್ರತಿ ನಿತ್ಯ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ1 ಗಂಟೆಯವರೆಗೆ ತರಗತಿ ನಡೆಯಲಿದೆ. ಮಧ್ಯಾಹ್ನ ಕಾಲೇಜು ಆವರಣದಲ್ಲಿ ಎಕ್ಸೆಲ್ ಕನೆಕ್ಟ್ ತರಗತಿಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ತಾಲೂಕಿನ ಎಲ್ಲಾ ಭಾಗದಿಂದಲೂ ಈ ವಿದ್ಯಾರ್ಥಿಗಳಿಗಾಗಿ ಉಚಿತ ಬಸ್ ವ್ಯವಸ್ಥೆಯನ್ನು ಕೂಡಾ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ ಕಾಲೇಜು ಕಛೇರಿ 8867242769/ 9880899769 ಸಂಪರ್ಕಿಸಬಹುದು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ಅನುಖ -2025 ರ ಸಂಭ್ರಮಾಚರಣೆ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya
error: Content is protected !!