35.1 C
ಪುತ್ತೂರು, ಬೆಳ್ತಂಗಡಿ
March 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಮಾ7ರಂದು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಪೋಷಕರ ಸಭೆಯನ್ನು ನಡೆಯಿತು.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸಫಾನ ಮಾತನಾಡಿ ಮಕ್ಕಳನ್ನು ಮೊಬೈಲಿಂದ ದೂರವಿರಿಸಲು ಪೋಷಕರ ಸಹಕಾರ ಅಗತ್ಯ ಡ್ರಗ್ಸ್ ಧೂಮಪಾನ ಗಳಿಂದ ಎಚ್ಚರ ವಹಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿ ನೋಡಲ್ ಅಧಿಕಾರಿ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ರಾಜೀವ ಸಾಲಿಯನ್ ಮಾತನಾಡಿ ಪೋಷಕರೊಂದಿಗೆ ಉತ್ತಮ ಸಂವಾದ ಶಾಲೆ ಮತ್ತು ಸಮುದಾಯದಲ್ಲಿ ಪೋಷಕರ ಸಹಭಾಗಿತ್ವ, ವಿವಿಧ ಅನುದಾನಗಳ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮದ್ದಡ್ಕ, ಉಪಾಧ್ಯಕ್ಷರು ನಸೀಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್, ಕಾರ್ಯದರ್ಶಿ ಸತೀಶ್ ದೇವಾಡಿಗ ಉಪಸ್ಥಿತರಿದ್ದರು.

ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ವರದಿ ಮಂಡಿಸಿದರು. ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಕಾರ್ಯಕ್ರಮ ನಿರೂಪಿಸಿದರು. ನಯನಾ.ಟಿ ಧನ್ಯವಾದ ನೀಡಿದರು. ಸಹಶಿಕ್ಷಕರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya
error: Content is protected !!