July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ, ಪೋಷಕರ ಸಭೆ

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಮಾ7ರಂದು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ ಮತ್ತು ಪೋಷಕರ ಸಭೆಯನ್ನು ನಡೆಯಿತು.

ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ವಹಿಸಿದ್ದ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸಫಾನ ಮಾತನಾಡಿ ಮಕ್ಕಳನ್ನು ಮೊಬೈಲಿಂದ ದೂರವಿರಿಸಲು ಪೋಷಕರ ಸಹಕಾರ ಅಗತ್ಯ ಡ್ರಗ್ಸ್ ಧೂಮಪಾನ ಗಳಿಂದ ಎಚ್ಚರ ವಹಿಸಲು ಸಲಹೆ ನೀಡಿದರು.

ಮುಖ್ಯ ಅತಿಥಿ ನೋಡಲ್ ಅಧಿಕಾರಿ ಬೆಳ್ತಂಗಡಿ ಗ್ರಾಮೀಣ ಉದ್ಯೋಗ ತಾಲೂಕು ಪಂಚಾಯತ್ ರಾಜೀವ ಸಾಲಿಯನ್ ಮಾತನಾಡಿ ಪೋಷಕರೊಂದಿಗೆ ಉತ್ತಮ ಸಂವಾದ ಶಾಲೆ ಮತ್ತು ಸಮುದಾಯದಲ್ಲಿ ಪೋಷಕರ ಸಹಭಾಗಿತ್ವ, ವಿವಿಧ ಅನುದಾನಗಳ ಸದ್ಬಳಕೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಂತೋಷ್ ಶೆಟ್ಟಿ ಮದ್ದಡ್ಕ, ಉಪಾಧ್ಯಕ್ಷರು ನಸೀಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್, ಕಾರ್ಯದರ್ಶಿ ಸತೀಶ್ ದೇವಾಡಿಗ ಉಪಸ್ಥಿತರಿದ್ದರು.

ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ವರದಿ ಮಂಡಿಸಿದರು. ಮುಖ್ಯ ಶಿಕ್ಷಕಿ ಉಷಾ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ ಜೈನ್ ಕಾರ್ಯಕ್ರಮ ನಿರೂಪಿಸಿದರು. ನಯನಾ.ಟಿ ಧನ್ಯವಾದ ನೀಡಿದರು. ಸಹಶಿಕ್ಷಕರು, ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya
error: Content is protected !!