23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

ಬೆಳ್ತಂಗಡಿ: ಜನರು ವಿದ್ಯಾವಂತರು , ಬುದ್ದಿವಂತರು ಆದಷ್ಟು ನಾಗರಿಕ ಸಮಾಜದಲ್ಲಿ ಅನಾಗರಿಕರಂತೆ ವರ್ತನೆ ಹೆಚ್ಚುತ್ತಿದೆ ಎಂಬುದಕ್ಕೆ ಉತ್ತಮ ಉದಾಹರಣೆ ನಾವೂರು ಗ್ರಾಮದ ಕೈಕಂಬ ಸೇತುವೆ. ದಿನನಿತ್ಯ ಬಳಕೆಯ ತ್ಯಾಜ್ಯಗಳನ್ನು ತಂದು ಸೇತುವೆ ಕೆಳಗೆ ಹರಿಯುವ ನದಿ ನೀರಿಗೆ ಸುರಿಯುವುದು ಇಲ್ಲಿ ಮಾಮೂಲು ಆಗಿದೆ.

ಸ್ಥಳೀಯವಾಗಿ ನಡೆಯುವ ಕಾರ್ಯಕ್ರಮದಲ್ಲಿ ಉಪಯೋಗಿಸುವ ಪ್ಲಾಸ್ಟಿಕ್ , ಹಾಳೆ ತಟ್ಟೆಗಳು , ಪ್ಲಾಸ್ಟಿಕ್ ಚೀಲಗಳು , ಬಾಟಲ್ ಗಳು , ಲೋಟಗಳು , ಬಿಯರ್ ಬಾಟಲ್ ಗಳು , ಮಹಿಳೆಯರು ಬಳಸುವ ಪ್ಯಾಡ್ , ಮಕ್ಕಳು ಮತ್ತು ಹಾಸಿಗೆ ಹಿಡಿದಿರುವವರ ಪ್ಯಾಂಪರ್ಸ್ ಸೇರಿದಂತೆ ಸೆಲೂನ್ ಗಳಲ್ಲಿ ಕತ್ತರಿಸಿದ ತಲೆಗೂದಲನ್ನು ಗೋಣಿಯಲ್ಲಿ ತಂದು ಇಲ್ಲಿ ಸುರಿಯುತ್ತಾರೆ. ಒಟ್ಟಾರೆಯಾಗಿ ಕೈಕಂಬ ಸೇತುವೆಯ ನದಿ ತೀರ ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗಿ ಪರಿವರ್ತನೆಗೊಳ್ಳುತ್ತಿದೆಯೇ ಎಂಬ ಸಂಶಯ ಉಂಟಾಗುವಂತಿದೆ.

ಸ್ವಚ್ಛ ಭಾರತ ಸೇರಿದಂತೆ ಹತ್ತಾರು ಕಾನೂನು , ಯೋಜನೆಗಳು ಜಾರಿಯಲ್ಲಿದ್ದರೂ ಗಾಂಧಿ ಜಯಂತಿಯಂದು ಮಾತ್ರ ಒಂದು ದಿನಕ್ಕೆ ಸ್ವಚ್ಚತಾ ಕಾರ್ಯ ಸೀಮಿತವಾಗಿದೆ. ಗ್ರಾಮ ಪಂಚಾಯತ್ ಗಳು ಸ್ವಚ್ಚತೆಗಾಗಿ ವರ್ಷಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ನಮ್ಮ ವಿದ್ಯಾವಂತ, ಬುದ್ದಿವಂತ ಜನರು ಮಾತ್ರ ತ್ಯಾಜ್ಯಗಳನ್ನು ನದಿ, ಸೇತುವೆ, ರಸ್ತೆ ಬದಿಯಲ್ಲಿ ಎಸೆಯುತ್ತಾ ಸ್ವಚ್ಛತೆಗೆ ಸವಾಲು ಹಾಕುವ ನೀಚತನ ಪ್ರದರ್ಶಿಸುತ್ತಾರೆ. ಗ್ರಾಮ ಪಂಚಾಯತ್ ಗಳು ಕಸ ಬಿಸಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಅಗತ್ಯವಿರುವ ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದರೆ ಮಾತ್ರ ಸ್ವಚ್ಛ ಭಾರತ ಪರಿಕಲ್ಪನೆ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾಧ್ಯ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

Related posts

ಉಜಿರೆ: ಜೋಸೆಫ್ ಮೇಲಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya
error: Content is protected !!