September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ 11: ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಉಜಿರೆಯಲ್ಲಿ ನಡೆಯಲಿದೆ ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ”

ಬೆಳ್ತಂಗಡಿ: ಮಾರ್ಚ್ 11 ಉಜಿರೆ ಶ್ರೀ ಜನಾರ್ದನ ದೇವರ ಬ್ರಹ್ಮಕಲಶೋತ್ಸವ ದಿನ ಸಾವಿರಾರು ಕಲಾವಿದರು,25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಂದ ಸಂಜೆ ಗಂಟೆ 4.00ರಿಂದ ಉಜಿರೆ ಡಿ.ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಧರ್ಮಯಾನ ಐತಿಹಾಸಿಕ ಶೋಭಾಯಾತ್ರೆ ನಡೆಯಲಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರು, ಗೋಪುರ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಮೋಹನ್ ಕುಮಾರ್ ಅವರು ತಿಳಿಸಿದ್ದಾರೆ.

ಈ ಐತಿಹಾಸಿಕ ಶೋಭಾಯಾತ್ರೆ ಭಕ್ತ ಸಮೂಹವೆಲ್ಲ ಜೊತೆ ಸೇರಿ ಸಂಘಟಿಸುವ ಭಕ್ತಿಯ ಅಪೂರ್ವ ಯಾತ್ರೆ.ಧರ್ಮದ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮದ ಸಾಕ್ಷಾತ್ ಪ್ರತಿನಿಧಿಗಳಾದ ಧರ್ಮದೇವತೆಗಳು ಉಜಿರೆಯ ಶ್ರೀ ಜನಾರ್ದನನ ಬ್ರಹ್ಮಕಲಶಕ್ಕೆ ಆಗಮಿಸುವ ದಿವ್ಯತೆಯ ಭವ್ಯಯಾತ್ರೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಧರ್ಮಾಧಿಕಾರಿಯಾಗಿ ಉಜಿರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಿ.ವೀರೇಂದ್ರ ಹೆಗ್ಗಡೆಯವರು ಆಗಮಿಸುವ ಧರ್ಮಯಾತ್ರೆ.ಇದು ನಮ್ಮ ಮಣ್ಣಿನ ಸಂಪ್ರದಾಯ ಪರಂಪರೆಯ ಪುಣ್ಯಯಾತ್ರೆ. ಇದು ‘ಧರ್ಮಯಾನ’ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮದೇವತೆಗಳಾದಿಯಾಗಿ ಉಜಿರೆ ಜನಾರ್ದನನ ಪೂರ್ಣಾನುಗ್ರಹ ಭಕ್ತರೆಲ್ಲರಿಗೆ ದೊರಕಲೆಂಬ ಭಕ್ತಿಯಿಂದ ಸಂಘಟಿಸುವ ಯಾತ್ರೆ, ಉಜಿರೆಯ ಭಕ್ತರ ಪಾಲಿಗೆ ಅವಿಸ್ಮರಣೀಯ ಅಧ್ಯಾತ್ಮಯಾತ್ರೆ.

ಉಜಿರೆ ಶ್ರೀ ಜನಾರ್ದನ ಸನ್ನಿಧಿಗೂ ಕುಡುಮಪುರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಪ್ರಾಚೀನ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಉಜಿರೆಯಲ್ಲಿ ಪ್ರತಿವರ್ಷ ಮಕರ ಸಂಕ್ರಾಂತಿಯಂದು ಕೊಡಿ ಏರಿ, ಒಂದು ವಾರಗಳ ಕಾಲ ಜಾತ್ರೆ ನಡೆಯುತ್ತದೆ. ಈ ಸಂದರ್ಭ ಧರ್ಮದೇವತೆಗಳು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರಾಮಹೋತ್ಸವಕ್ಕೆ ಆಗಮಿಸುವ ಪ್ರತೀತಿ ಇದೆ. ಹಾಗಾಗಿ ಮಕರ ಸಂಕ್ರಾಂತಿಯ ಪರ್ವಕಾಲದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅಣ್ಣಪ್ಪ ಬೆಟ್ಟದಲ್ಲಿ ನಡೆಯುವ ನೇಮ ಎರಡು ದಿನ ಮುಂಚಿತವಾಗಿ – ನಡೆಯುತ್ತದೆ. ಈ ಸಂಪ್ರದಾಯ ಈಗಲೂ ಮುಂದುವರೆದಿದೆ.

ಧರ್ಮದೇವತೆಗಳ ಪ್ರತಿನಿಧಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉಜಿರೆ ಕ್ಷೇತ್ರಕ್ಕೆ ಆಗಮಿಸುವ ಈ ಸುಸಂದರ್ಭದಲ್ಲಿ ಧರ್ಮದೇವತೆಗಳೇ ಅವರೊಂದಿಗೆ ಬರುತ್ತಾರೆಂಬ ನಂಬಿಕೆ ಇದೆ. ಈ “ಧರ್ಮ”ಯಾನಕ್ಕೆ ತಮ್ಮನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಸ್ವಾಗತಿಸುತ್ತಿದ್ದೇವೆ.

ಈ ಧರ್ಮಯಾನ ಶೋಭಾಯಾತ್ರೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್. ಇವರ ಮಾರ್ಗದರ್ಶನ, ವಿಜಯಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಇವರ ನೇತೃತ್ವ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಇವರ ಸಹಕಾರದೊಂದಿಗೆ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರು ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು, ತಾಲೂಕಿನ ಸಮಸ್ತ ಭಗವದ್ಭಕ್ತರು, ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Related posts

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಏ.19: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಆರಾಧಕರ ಸಭೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದ ಮಾಧುರ್ಯ ರವರಿಗೆ ಹವ್ಯಕ ಮಂಡಲದ ವತಿಯಿಂದ ಗೌರವ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!