30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

ಬೆಳ್ತಂಗಡಿ: ಸಿಯೋನ್ ಆಶ್ರಮದ ನಿವಾಸಿಗಳ ಸುಖಕರ ವಾಸ್ತವ್ಯಕ್ಕಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಕ್ಲಬ್ ಇಂದಿರಾನಗರ (ಬೆಂಗಳೂರು) ಅವರ ಮುಂದಾಳತ್ವದಲ್ಲಿ ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಒಟ್ಟು 135 ಮಂಚಗಳು, ಹಾಸಿಗೆಗಳು, ಬೆಡ್‌ಶೀಟ್‌ಗಳು ಮತ್ತು ತಲೆದಿಂಬುಗಳು ಕೊಡುಗೆಯಾಗಿ ಮಾ.6ರಂದು ನೀಡಲಾಯಿತು.

ಕಾರ್ಯಕ್ರಮವನ್ನು ಕಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಪ್ರಶಾಂತ್ ಜೋಯಿಷಿ ಉದ್ಘಾಟಿಸಿ, ಅಶಕ್ತರು, ಅನಾಥರು ಹಾಗೂ ನಿರಾಶ್ರಿತರಿಗೆ ಆಶ್ರಯ ಮತ್ತು ಆರೈಕೆ ನೀಡುತ್ತಿರುವ ಸಿಯೋನ್ ಆಶ್ರಮದ ಮಹತ್ತರ ಸೇವೆಯನ್ನು ಶ್ಲಾಘಿಸಿದರು. ಜೊತೆಗೆ ಸಂಸ್ಥೆಯ ಮುಂದಿನ ಅಭಿವೃದ್ಧಿ ಹಾಗೂ ಸೇವಾ ಕಾರ್ಯಗಳಿಗೆ ಶುಭಾಶಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್, ರೋಟರಿ ಕ್ಲಬ್ ಅಧ್ಯಕ್ಷ ಶ್ರೀ ಪ್ರಕಾಶ್ ಪ್ರಭು, ಹಿಂದಿನ ಅಧ್ಯಕ್ಷ ಶ್ರೀ ಅನಂತ ಭಟ್ ಮಚ್ಚಿಮಲೆ, ರೋಟರಿ ಪ್ರಾಜೆಕ್ಟ್ ಚೇರ್ಮನ್ ಶ್ರೀ ಅಬುಬಕ್ಕರ್, ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು.ಪಿ., ಆಡಳಿತಾಧಿಕಾರಿ ಶೋಭಾ ಯು.ಪಿ., ಲೆಕ್ಕಾಧಿಕಾರಿ ಸೌಮ್ಯ ಯು.ಪಿ., ಸಂಸ್ಥೆಯ ಆಡಳಿತ ವರ್ಗದವರು, ಸಿಬ್ಬಂದಿ ವರ್ಗ ಹಾಗೂ ಆಶ್ರಮದ ನಿವಾಸಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಎಸ್‌ಡಿಎಂ ಕಾಲೇಜು ಆಫ್ ನ್ಯಾಚುರೋಪತಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya
error: Content is protected !!