July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

ಬೆಳ್ತಂಗಡಿ : ಲೇಖಕಿ ಶ್ರೀಮತಿ ಶ್ವೇತಾ ದಿಲೀಪ್ ಕುತ್ಲೂರು ನಾರಾವಿ ಇವರ ಚೊಚ್ಚಲ ಕೃತಿ ಜೀವನದ ಬೆಳಕು ಮಾ.8 ರಂದು ಬಿಡುಗಡೆಗೊಂಡಿತು.

ಪುತ್ತೂರು ವಿದ್ಯಾಮಾತ ಅಕಾಡೆಮಿ ಸಭಾಂಗಣದಲ್ಲಿ ನಡೆದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಪುತ್ತೂರು ತಾಲೂಕು ಘಟಕದ ಪದಗ್ರಹಣ ಹಾಗೂ ಆಮಂತ್ರಣ ಟೀಮ್ ಗಾನಯಾನದ ಜೋಡಿಗಾಯನ ಸಮಾರಂಭದಲ್ಲಿ ಬಿಡುಗಡೆಗೊಂಡಿತು.

ಜೀವನದ ಬೆಳಕು ಕೃತಿಯನ್ನು ಹಿರಿಯ ಮುತ್ಸದ್ದಿ ಆಮಂತ್ರಣ ಗೌರವ ಸಲಹೆಗಾರರಾದ ಬಿ.ಭುಜಬಲಿ ಧರ್ಮಸ್ಥಳ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲೇಖಕಿ ಶ್ವೇತಾ ದಿಲೀಪ್ ನಾರಾವಿ, ಸ್ವರ್ಣಲತಾ ವೀರೇಂದ್ರ ಕುಮಾರ್ ಕಾಯರ್ತಡ್ಕ, ಅಮ್ಮಾಜಿ ಬಿ.ಜೈನ್,
ದಿಲೀಪ್ ಕುಮಾರ್ ಜೈನ್, ಪೃಥ್ವಿರಾಜ್ ಜೈನ್ ಬೆಂಗಳೂರು,ಆದಿತ್ಯ ಜೈನ್ ಸಹಕರಿಸಿದರು.

ಸಮಾರಂಭದಲ್ಲಿ ಹಿರಿಯ ಸಾಹಿತಿ ನಾರಾಯಣ ರೈ ಕುಕ್ಕುವಳ್ಳಿ ,ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ ಕಡೇಶಿವಾಲಯ,ಉಪಾಧ್ಯಕ್ಷೆ ಅನಿತಾ ಶೆಟ್ಟಿ ಮೂಡುಬಿದಿರೆ, ಉಡುಪಿ ಆಮಂತ್ರಣ ಜಿಲ್ಲಾಧ್ಯಕ್ಷೆ ಪುಷ್ಪಪ್ರಸಾದ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಉಮೇಶ್ ನಾಯಕ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಪುತ್ತೂರು ಆಮಂತ್ರಣ ವೇದಿಕೆಯ ನೂತನ ಅಧ್ಯಕ್ಷರಾದ ಆಶಾಮಯ್ಯ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಲೇಖಕಿಯ ಪರಿಚಯ ಮಾಡಿದರು.

Related posts

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya
error: Content is protected !!