23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

ಶಿಬಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಶಿಬಾಜೆ ಕಾರ್ಯಕ್ಷೇತ್ರದ ತ್ರೈಮಾಸಿಕ ಒಕ್ಕೂಟ ಸಭೆಯಲ್ಲಿ ಹಾವುಗಳನ್ನು ಗುರುತಿಸುವಿಕೆ ಮನ್ನೆಚ್ಚರಿಕೆ ಹಾಗೂ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಕ್ರಮ ನಡೆಯಿತು.

ಧರ್ಮಸ್ಥಳ ಶ್ರೀ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ ಅರಸಿನಮಕ್ಕಿ ಇದರ ಸದಸ್ಯ ರಮೇಶ ಬೈರಕಟ್ಟರವರು ಅರಣ್ಯ ಇಲಾಖೆಯಿಂದ ಗುರುತಿಸಲ್ಪಟ್ಟ ಉರಗ ರಕ್ಷಕ ಸುರೇಶ್ ಶಿಬಾಜೆ ಇವರ ಮಾರ್ಗದರ್ಶನದಲ್ಲಿ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಶಿಬಾಜೆ ಒಕ್ಕೂಟದ ಅಧ್ಯಕ್ಷ ಪ್ರಭಾಕರ ಟಿ.ಆರ್., ಜನಜಾಗೃತಿ ವೇದಿಕೆಯ ತಾಲೂಕು ಸಮಿತಿ ಸದಸ್ಯ ಎಚ್.ಎಸ್. ಚೆನ್ನಪ್ಪಗೌಡ ,ವಲಯಾಧ್ಕಕ್ಷ ಗಣೇಶ್ ಗೌಡ, ವಲಯ ಮೇಲ್ವಿಚಾರಕಿ ಶಶಿಕಲಾ, ಬೆಳ್ತಂಗಡಿ ತಾಲೂಕು ಶೌರ್ಯ ಮಾಸ್ಟರ್ ಅವಿನಾಶ್ ಭಿಡೆ, ಶಿಶಿಲ ಆರಸಿನಮಕ್ಕಿ ಶೌರ್ಯ ಸಂಯೋಜಕಿ ರಶ್ಮಿತಾ ಟಿ.ಬಿ., ಶಿಬಾಜೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಯೋಗೀಶ್ ಗ್ರಾಹಕ ಸೇವಾಕೇಂದ್ರದ ದಿವ್ಯಾ ಹಾಗೂ ಒಕ್ಕೂಟ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಉದ್ದೇಶ ಹಾಗೂ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಾಯಿತು.ವಿಷರಹಿತ ಹಾಗೂ ವಿಷಪೂರಿತ ಹಾವುಗಳ ಗುರುತಿಸುವಿಕೆ ಕುರಿತು ಸಚಿತ್ರ ವಿವರಣೆ ನೀಡಲಾಯಿತು.
ಹಾವುಗಳು ಮನೆಯೊಳಗೆ ಬರದಂತೆ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಪ್ರಥಮ ಚಿಕಿತ್ಸಾ ಮಾಹಿತಿಯನ್ನು ನೀಡಲಾಯಿತು.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!